ಕೊಚ್ಚಿ: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿಯೇ ಮೊದಲ ಬಾರಿಗೆ ರಾತ್ರಿ ವೇಳೆ ಪ್ರಕರಣವೊಂದರ ವಿಚಾರಣೆ ನಡೆಸಲಾಗಿದೆ. ಆ ಮೂಲಕ ಕೇರಳ ಹೈಕೋರ್ಟ್ ಇತಿಹಾಸ ಸೃಷ್ಟಿಸಿದೆ.
ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿದ್ದ ಹಡಗು ನಿಗದಿತ ಶುಲ್ಕವನ್ನು ತೆರಲು ನಿರಾಕರಿಸಿತ್ತು.
ರಾತ್ರಿ 11.30ಕ್ಕೆ ಜಸ್ಟೀಸ್ ದೇವನ್ ರಾಮಚಂದ್ರನ್ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ವರ್ಚುವಲ್ ವಿಚಾರಣೆ ನಡೆಸಿ ಉಳಿಸಿಕೊಂಡಿರುವ ಮೊತ್ತ ಸಂದಾಯವಾಗದಿದ್ದಲ್ಲಿ ಹಡಗನ್ನು ವಶಪಡಿಸಿಕೊಳ್ಳುವಂತೆ ಆದೇಶಿಸಿದರು.
ಒಟ್ಟು 2.44 ಕೋಟಿ ರೂ. ಗಳನ್ನು ಹಡಗು ಮಾಲೀಕರು ಬಾಕಿ ಉಳಿಸಿಕೊಂಡಿದ್ದಾರೆ. ಬಾಕಿ ಮೊತ್ತವನ್ನು 25,000 ರೂ. ಬಡ್ಡಿ ಸೇರಿಸಿ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada