ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಣೆಗೆ ಅರ್ಜಿ ಅಹ್ವಾನ

 

 ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿದೆ. ಮಂಡಳಿಯ ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. ನೋಂದಣಿಯ ಹಿರಿತನದ ಅಧಾರದಲ್ಲಿ ಟ್ಯಾಬ್ ವಿತರಿಸಲಾಗುವುದು. 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಫಲಾನುಭವಿಯ ಒಂದು ಮಗುವಿಗೆ ಮೊದಲ ಪ್ರಾಶಸ್ತ್ಯ. ಕೊನೆಯ ದಿನಾಂಕ ಮುಗಿದ ನಂತರ ಬರುವ ಅರ್ಜಿ ಸ್ವೀಕರಿಸಲಾಗುವುದಿಲ್ಲ.ಅರ್ಜಿ ನಮೂನೆಯೊಂದಿಗೆ ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿಯ ಪ್ರತಿ ಹಾಗೂ ನವೀಕರಣ ಗುರುತಿನ ಚೀಟಿಯ ಪ್ರತಿ, ಫಲಾನುಭವಿ ಹಾಗೂ ಮಗುವಿನ ಆಧಾರ್ ಕಾರ್ಡ್ ಪ್ರತಿ. ವಿದ್ಯಾರ್ಥಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ. ಸರ್ಕಾರದ ಯಾವುದಾದರೂ ಯೋಜನೆಯಲ್ಲಿ ಇದುವರೆಗೂ ಟ್ಯಾಬ್ ಪಡೆಯದಿರುವ ಬಗ್ಗೆ ಅಫಿಡವಿಟ್ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು, ಮಡಿಕೇರಿ ವೃತ್ತ, ಸೋಮವಾರಪೇಟೆ ವೃತ್ತ, ವಿರಾಜಪೇಟೆ ವೃತ್ತರವರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಅವರು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿದ್ದಣ್ಣ ಮಸಳಿ ಮಹಾನ್ ಕವಿ.

Wed Jan 4 , 2023
ಸಿದ್ದಣ್ಣ ಮಸಳಿ ಮಹಾನ್ ಕವಿ. ಅವರ ರಚನೆಯಾದ ‘ಪಂಜರದ ಪಕ್ಷಿ’ ಕವಿತೆ ಶಾಲೆಯಲ್ಲಿ ಓದಿದ್ದು, ಇಂದೂ ನನ್ನ ಮನದಲ್ಲಿ ಪ್ರಭಾವಿಯಾಗಿ ನಿಂತಿದೆ. ಆ ಕವಿತೆಯನ್ನು ಪ್ರತ್ಯೇಕವಾಗಿ ಇಂದೂ ಪೋಸ್ಟ್ ಮಾಡಿದ್ದೇನೆ. ಇಂದು ಈ ಮಹನೀಯರ ಸಂಸ್ಮರಣಾ ದಿನ. ಸಿದ್ದಣ್ಣ ಮಸಳಿ 1927ರ ಏಪ್ರಿಲ್ 6ರಂದು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಮಸಳಿಯಲ್ಲಿ ಜನಿಸಿದರು. ತಂದೆ ಗಿರಿಮಲ್ಲಪ್ಪ. ತಾಯಿ ತಂಗೆಮ್ಮ. ಹಿರೇಮಸಳಿಯಲ್ಲಿ ಪ್ರಾಥಮಿಕ ಶಿಕ್ಷಣ, ವಿಜಯಪುರದಲ್ಲಿ ಮಾಧ್ಯಮಿಕ ಶಿಕ್ಷಣ, ಬಿ.ಎ.ಪದವಿ, ಬಿ.ಎಡ್. […]

Advertisement

Wordpress Social Share Plugin powered by Ultimatelysocial