ರಿಲಯನ್ಸ್‌ ಜಿಯೋ ನಿರ್ದೇಶಕ ಸ್ಥಾನಕ್ಕೆ ಮುಕೇಶ್‌ ಅಂಬಾನಿ ರಾಜೀನಾಮೆ

ರಿಲಯನ್ಸ್‌ ಜಿಯೋ ಇನ್ಫೋಕಾಂ ನಿರ್ದೇಶಕ ಸ್ಥಾನಕ್ಕೆ ರಿಲಯನ್ಸ್‌ ಇಂಡಸ್ಟ್ರೀಸ್‌ ಸಮೂಹ ಸಂಸ್ಥೆಗಳ ಮುಖ್ಯಸ್ಥ ಮುಕೇಶ್‌ ಅಂಬಾನಿ ರಾಜೀನಾಮೆ ನೀಡಿದ್ದಾರೆ. ಅವರ ಪುತ್ರ ಆಕಾಶ್‌ ಅಂಬಾನಿ ರಿಲಯನ್ಸ್‌ ಜಿಯೋ ಚೇರ್ಮನ್‌ ಆಗಿ ಕಾರ್ಯ ನಿರ್ವಹಿಸಲಿದ್ದು, ಇದು ಜೂನ್‌ 27 ರಿಂದಲೇ ಜಾರಿಗೆ ಬಂದಿದೆ.

ಈ ಕುರಿತ ಪ್ರಕಟಣೆ ಇಂದು ಹೊರ ಬಿದ್ದಿದ್ದು, ಅಕಾಶ್‌ ಅಂಬಾನಿಯವರು ರಿಲಯನ್ಸ್‌ ಜಿಯೋ ಇನ್ಫೋಕಾಂ ನ ಕಾರ್ಯಕಾರಿ ನಿರ್ದೇಶಕ ಮಂಡಳಿಯ ಚೇರ್ಮನ್‌ ಆಗಿ ಮುಂದುವರೆಯಲಿದ್ದಾರೆ ಎಂದು ತಿಳಿಸಲಾಗಿದೆ.

ಪಂಕಜ್‌ ಮೋಹನ್‌ ಪವಾರ್‌ ಅವರು ಕಂಪನಿಯ ಮ್ಯಾನೇಜಿಂಗ್‌ ಡೈರೆಕ್ಟರ್‌ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

2021 ರಲ್ಲೇ ಮುಕೇಶ್‌ ಅಂಬಾನಿಯವರು ತಮ್ಮ ಮಕ್ಕಳಿಗೆ ಉದ್ಯಮದ ಜವಾಬ್ದಾರಿ ನೀಡುವ ಸೂಚನೆ ನೀಡಿದ್ದರು. ತಮ್ಮ ತಂದೆ ಧೀರೂಭಾಯ್‌ ಅಂಬಾನಿಯವರಂತೆ ಮಕ್ಕಳು ಸಹ ಉದ್ಯಮದಲ್ಲಿ ಶ್ರದ್ದೆ ಹೊಂದಿದ್ದಾರೆ ಎಂದು ಹೇಳಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೊಹಮ್ಮದ್ ಜುಬೇರ್ ಅನ್ನು ಬಂಧಿಸಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ

Tue Jun 28 , 2022
  ಬೆಂಗಳೂರು, ಜೂನ್ 28: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಆರೋಪದ ಹಿನ್ನೆಲೆ ಆಲ್ಟ್‌ನ್ಯೂಸ್ ಪತ್ರಕರ್ತ ಮೊಹಮ್ಮದ್ ಜುಬೇರ್ ಅನ್ನು ಬಂಧಿಸಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. “ಆಲ್ಟ್ ನ್ಯೂಸ್ ಸ್ಥಾಪಕರಲ್ಲೊಬ್ಬರಾದ ಪತ್ರಕರ್ತ ಮುಹಮ್ಮದ್ ಜುಬೇರ್ ಬಂಧನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಹತಾಶ ಪ್ರಯತ್ನವಾಗಿದೆ,” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. “ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಹೇರಲು ಹೊರಟಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ […]

Advertisement

Wordpress Social Share Plugin powered by Ultimatelysocial