ಅಕ್ರಮವಾಗಿ ರೆಮ್ಡಿಸಿವಿರ್ ಮಾರಾಟ: ಸಿಸಿಬಿ ಪೊಲೀಸರಿಂದ 16 ಮಂದಿ ಬಂಧನ…

Remedicivir –sale- illegally-16 arrested – CCB- police

ಬೆಂಗಳೂರು,ಏಪ್ರಿಲ್,24,2021 :  ಬೆಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಕೊರೋನಾ ಸೊಂಕಿತರಿಗೆ ಚಿಕಿತ್ಸೆ ನೀಡಲು ಬಳಸಲಾಗುವ ರೆಮ್ಡಿಸಿವಿರ್  ಅನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 16 ಮಂದಿಯನ್ನು ಬಂಧಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿ ಮಾಹಿತಿ ನೀಡಿದ  ಸಿಸಿಬಿ ಜಂಟಿ ಆಯುಕ್ತ  ಸಂದೀಪ್ ಪಾಟೀಲ್ ಅವರು, ಅಕ್ರಮವಾಗಿ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ 16 ಮಂದಿಯನ್ನ ಬಂಧಿಸಲಾಗಿದೆ. ‘ಅಕ್ರಮವಾಗಿ ಚುಚ್ಚುಮದ್ದು ಸಂಗ್ರಹಿಸಿಟ್ಟುಕೊಂಡಿದ್ದ ಆರೋಪಿಗಳು, 10 ಸಾವಿರ ರೂದಿಂದ 11 ಸಾವಿರ ರೂಗೆ ಮಾರಾಟ ಮಾಡುತ್ತಿದ್ದರು. ಈ ಜಾಲದಲ್ಲಿ ಮತ್ತಷ್ಟು ಮಂದಿ ಇದ್ದು, ಅವರ ಪತ್ತೆಗೆ ತನಿಖೆ ಮುಂದುವರಿದಿದೆ ಎಂದಿದ್ದಾರೆ.

ಬೆಂಗಳೂರಿನ ಹಲವೆಡೆ ಏಕಕಾಲದಲ್ಲಿ ದಿಢೀರ್ ದಾಳಿ ಮಾಡಿದ ಸಿಸಿಬಿ ಪೊಲೀಸರು, 16 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ 55 ಚುಚ್ಚುಮದ್ದು ಬಾಟಲಿಗಳನ್ನು ಜಪ್ತಿ ಮಾಡಿದ್ದಾರೆ. ಬಂಧಿತರಲ್ಲಿ ಇಬ್ಬರು, ವೈದ್ಯಕೀಯ ಔಷಧಿಗಳ ವಿತರಕರಾಗಿದ್ದು, ಅವರೆಲ್ಲರ ವಿರುದ್ದ 6 ಪ್ರತ್ಯೇಕ ಎಫ್‌ಐಆರ್ ದಾಖಲಾಗಿದೆ ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೈಕಮಾಂಡ್ ಯಾರನ್ನೇ ಸಿಎಂ ಮಾಡಿದ್ರೂ ನನ್ನ ವಿರೋಧ ಇಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ.

Tue Oct 19 , 2021
ಬೆಂಗಳೂರು,ಅಕ್ಟೋಬರ್,19,2021 :  ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿ ಘೋಷಣೆ ಮಾಡುವುದಿಲ್ಲ. ಹೈಕಮಾಂಡ್ ಯಾರನ್ನೇ ಸಿಎಂ ಮಾಡಿದರೂ ನನ್ನ ವಿರೋಧ ಇಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ನುಡಿದಿದ್ದಾರೆ. ಸಿಎಂ ಇಬ್ರಾಹಿಂಗೆ ಟಾಂಗ್ ನೀಡಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಚುನಾವಣೆಗೂ ಮುನ್ನ ಸಿಎಂ ಘೋಷಣೆ ಮಾಡಲ್ಲ ಈ ಸಂಸ್ಕೃತಿ ಕಾಂಗ್ರೆಸ್ ನಲ್ಲಿ ಇಲ್ಲ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ. ಸಿಎಂ ಯಾರಾಗಬೇಕೆಂದು ಹೈಕಮಾಂಢ್ ಸೂಚಿಸುತ್ತೇ. ಹೈಕಮಾಂಡ್ ಯಾರನ್ನೂ ಸಿಎಂ ಮಾಡಿದ್ರೂ ನನ್ನ […]

Advertisement

Wordpress Social Share Plugin powered by Ultimatelysocial