ಬೆಂಗಳೂರು : ಇಂದು ಬೆಳಿಗ್ಗೆ ನಿಧನರಾದ ಖ್ಯಾತ ಕನ್ನಡ ಕವಿ, ವಿಮರ್ಶಕ, ಭಾಷಾ ಶಾಸ್ತ್ರಜ್ಞ ಕೆ ವಿ ತಿರುಮಲೇಶ್ ಅವರ ನಿಧನ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.
ಖ್ಯಾತ ಕನ್ನಡ ಕವಿ, ವಿಮರ್ಶಕ, ಭಾಷಾ ಶಾಸ್ತ್ರಜ್ಞ ಕೆ ವಿ ತಿರುಮಲೇಶ್ ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ.
ಅವರ ಸಾಹಿತ್ಯ ಕೃಷಿ, ಜ್ಞಾನ ಸಂಪತ್ತು ಅನುಪಮವಾದುದು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಕೆ ವಿ ತಿರುಮಲೇಶ್ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ. ಅವರ ಸಾಹಿತ್ಯ ಕೃಷಿ, ಜ್ಞಾನ ಸಂಪತ್ತು ಅನುಪಮವಾದುದು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಸಂತಾಪ ಸೂಚಿಸಿದ್ದಾರೆ.
https://play.google.com/store/apps/details?id=com.speed.newskannada