ಹೊಳೆನರಸೀಪುರ ತಹಸೀಲ್ದಾರ್ ಕೆ. ಆರ್. ಶ್ರೀನಿವಾಸ್ ರವರು ಹಳ್ಳಿ ಮೈಸೂರು ಹೋಬಳಿಯ ಕಡವಿನ ಬಾಚನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕಂದಾಯ ಅದಾಲತ್ ಕಾರ್ಯಕ್ರಮ ನಡೆಸಿದರು. ಈ ಸಂದರ್ಭದಲ್ಲಿ ಪೌತಿ ಖಾತೆ ಮಾಡಿಸುವುದು, ಸ್ಮಶಾನ ಒತ್ತುವರಿ ಬಿಡಿಸುವುದು, ಪಿಂಚಣಿ ಮಂಜೂರಿ ಮತ್ತು ಹೇಮಾವತಿ ನೀರಾವರಿ ಯೋಜನೆಯಡಿ ಸ್ಥಳಾಂತರಗೊಂಡ ಗ್ರಾಮಕ್ಕೆ ಹಕ್ಕುಪತ್ರ ಕೊಡಿಸಲು ಕ್ರಮವಹಿಸುವುದಾಗಿ ತಿಳಿಸಿದರು.
ಗ್ರಾಮದಲ್ಲಿ ಶಿಥಿಲಗೊಂಡಿರುವ ಓವರ್ ಹೆಡ್ ಟ್ಯಾಂಕ್ ನಲ್ಲಿ ಹೆಚ್ಚು ನೀರು ನಿಲ್ಲುತ್ತಿದ್ದು ಈ ಸಮಸ್ಯೆಯನ್ನು ಸರಿಪಡಿಸಲು ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಸಮಸ್ಯೆ ಬಗೆಹರಿಸಲು ತಿಳಿಸಲಾಯಿತು. ಇದೇ ವೇಳೆ ಕೋವಿಡ್ -19 ಸಂಬಂಧ ಕೊರೋನಾ ಪರೀಕ್ಷೆಗಳನ್ನು ಹೆಚ್ಚು ನಡೆಸಲು ಗ್ರಾಮಸ್ಥರಲ್ಲಿ ಮನವಿ ಮಾಡಲಾಯಿತು.