ಹಕ್ಕುಪತ್ರ ಪಡೆದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಕ್ರಮ – ಸಕ್ರಮ ನಿವೇಶನ ಯೋಜನೆಯಡಿ ಹಕ್ಕು ಪತ್ರ ಪಡೆದವರಿಗೆ ಸರ್ಕಾರ ಕೊನೆಗೂ ಗುಡ್ ನ್ಯೂಸ್ ನೀಡಿದೆ. ನಿವೇಶನ ಹಕ್ಕು ಪತ್ರವನ್ನು ಅಡಮಾನವಿಟ್ಟು ಬ್ಯಾಂಕ್ ಸಾಲ ಪಡೆಯಲು ಈಗ ಅವಕಾಶ ಮಾಡಿಕೊಡಲಾಗಿದೆ.ಈ ಮೊದಲು ಯೋಜನೆಯಡಿ ನಿವೇಶನ ಹಕ್ಕುಪತ್ರ ಪಡೆದವರಿಗೆ ಇದನ್ನು ಅಡಮಾನ ಮಾಡಬಾರದೆಂಬ ಷರತ್ತನ್ನು ವಿಧಿಸಲಾಗಿತ್ತು.ಅಲ್ಲದೆ ಇದನ್ನು ಹಕ್ಕುಪತ್ರದಲ್ಲಿ ಸಹ ಮುದ್ರಿಸಲಾಗಿತ್ತು. ಹೀಗಾಗಿ ಫಲಾನುಭವಿಗಳು ಬ್ಯಾಂಕ್ ಮೂಲಕ ಸಾಲ ಪಡೆಯಲು ಹೋದರೆ ತೊಂದರೆಯಾಗುತ್ತಿತ್ತು. ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದ ಬಳಿಕ ಇದೀಗ ಗೃಹ ನಿರ್ಮಾಣ ಅಡಮಾನ ಸಾಲಕ್ಕೆ ಯಾವುದೇ ನಿರ್ಬಂಧ ವಿಧಿಸದೆ ಬ್ಯಾಂಕಿನಲ್ಲಿ ಸಾಲ ನೀಡುವಂತೆ ಆದೇಶ ಹೊರಡಿಸಲಾಗಿದೆ. ಹೀಗಾಗಿ ಅಕ್ರಮ – ಸಕ್ರಮ ನಿವೇಶನ ಯೋಜನೆಯಡಿ ಹಕ್ಕು ಪತ್ರ ಪಡೆದ ಫಲಾನುಭವಿಗಳು ಬ್ಯಾಂಕುಗಳಿಂದ ಅಡಮಾನ ಸಾಲ ಪಡೆಯುವ ಅವಕಾಶ ಲಭ್ಯವಾದಂತಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸೂರ್ಯಕುಮಾರ್ ಕೆಎಸ್ ಭರತ್.

Thu Feb 9 , 2023
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದು (ಗುರುವಾರ, ಫೆಬ್ರವರಿ 9) ನಾಗ್ಪುರದಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಭಾರತದ ವೇಗಿಗಳಾದ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಪ್ರವಾಸಿ ಆಸ್ಟ್ರೇಲಿಯಾ ತಂಡದ ಆರಂಭಿಕ ವಿಕೆಟ್‌ಗಳನ್ನು ಕಿತ್ತು ಆಘಾತ ನೀಡಿದ್ದಾರೆ. ಮೊಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಉಸ್ಮಾನ್ ಖವಾಜಾ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರೆ, ಮೊಹಮ್ಮದ್ ಶಮಿ […]

Advertisement

Wordpress Social Share Plugin powered by Ultimatelysocial