ರಿಷಬ್​ ಪಂತ್​ ನೋಡಲು ಗಣ್ಯರ ದಂಡು

ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಡಿಸೆಂಬರ್ 30 ರಂದು ಬೆಳಗಿನ ಜಾವ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಭಾರತದ ಕೀಪರ್-ಬ್ಯಾಟರ್ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ದಾಖಲಾದ ನಂತರ, ಅನೇಕ ಉನ್ನತ ಮಟ್ಟದ ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.ಇದರಿಂದ ಪಂತ್‌ಗೆ ಅಗತ್ಯವಾದ ವಿಶ್ರಾಂತಿ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.ಪಂತ್ ಇನ್ನೂ ನೋವಿನಿಂದ ಬಳಲುತ್ತಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಸಲು ಹಲವರು ಭೇಟಿ ನೀಡುತ್ತಿದ್ದಾರೆ. ಆದರೆ ಇದರಿಂದ ಅವರಿಗೆ ಚೇತರಿಸಿಕೊಳ್ಳಲು ಆಗುತ್ತಿಲ್ಲ ಎನ್ನುವ ನೋವು ಕುಟುಂಬಸ್ಥರದ್ದು. ಈ ಕುರಿತು ವೈದ್ಯರ ಬಳಿ ಅವರು ಅಸಮಾಧಾನ ಹೊರಹಾಕಿದ್ದಾರೆ.”ರಿಷಬ್ ಅವರು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ವಿಶ್ರಾಂತಿ ಪಡೆಯಲು ಸಾಕಷ್ಟು ಸಮಯವನ್ನು ಪಡೆಯುವುದು ಮುಖ್ಯವಾಗಿದೆ. ಅಪಘಾತದಲ್ಲಿ ಉಂಟಾದ ಗಾಯಗಳಿಂದಾಗಿ ಅವರು ಇನ್ನೂ ನೋವಿನಲ್ಲಿದ್ದಾರೆ. ಆದ್ದರಿಂದ ಅವರಿಗೆ ಸಂಪೂರ್ಣ ರೆಸ್ಟ್​ ಅವಶ್ಯಕತೆ ಇದೆ” ಎಂದು ವೈದ್ಯರು ಹೇಳುತ್ತಿದ್ದಾರೆ.”ಆಸ್ಪತ್ರೆಯ ಭೇಟಿಯ ಸಮಯವು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಮತ್ತು ಸಂಜೆ 4 ರಿಂದ 5 ರವರೆಗೆ ಇರುತ್ತದೆ ಮತ್ತು ಯಾವುದೇ ಸಮಯದಲ್ಲಿ ಒಬ್ಬ ಸಂದರ್ಶಕರು ಮಾತ್ರ ರೋಗಿಯನ್ನು ಭೇಟಿ ಮಾಡಬಹುದು. ರಿಷಬ್ ಪಂತ್ ಅವರ ಪ್ರಕರಣವು ಉನ್ನತ ಪ್ರೊಫೈಲ್ ಆಗಿದೆ, ಇದರಿಂದಾಗಿ ಹೆಚ್ಚಿನ ಸಂದರ್ಶಕರು ಬರುತ್ತಿರುವುದರಿಂದ ತೊಂದರೆ ಆಗುತ್ತಿದೆ ಎಂದಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆಮರೂನ್ ಗ್ರೀನ್‌ಗೆ ಕ್ರಿಕೆಟ್ ಆಸ್ಟ್ರೇಲಿಯಾ ಮಹತ್ವದ ಸೂಚನೆ

Tue Jan 3 , 2023
2023ರ ಐಪಿಎಲ್ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ಆಲ್‌ರೌಂಡರ್ ಕೆಮರೂನ್ ಗ್ರೀನ್‌ರನ್ನು 17.50 ಕೋಟಿ ರುಪಾಯಿ ನೀಡಿ ಮುಂಬೈ ಇಂಡಿಯನ್ಸ್ ಖರೀದಿ ಮಾಡಿತು. 2023ರ ಐಪಿಎಲ್‌ನಲ್ಲಿ ಗ್ರೀನ್ ಮುಂಬೈ ಇಂಡಿಯನ್ಸ್ ಪರವಾಗಿ ಪ್ರಮುಖ ಪಾತ್ರ ವಹಿಸಲಿದ್ದಾರೆ.ಕೆಮರೂನ್ ಗ್ರೀನ್ ಸೇರ್ಪಡೆಯಿಂದ ಖುಷಿಯಾಗಿದ್ದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮತ್ತು ಅಭಿಮಾನಿಗಳಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಶಾಕ್ ನೀಡಿದೆ.ಏಪ್ರಿಲ್ 13ರವರೆಗೆ ಬೌಲಿಂಗ್ ಮಾಡದಂತೆ ಕೆಮರೂನ್ ಗ್ರೀನ್‌ಗೆ ಕ್ರಿಕೆಟ್ ಆಸ್ಟ್ರೇಲಿಯಾ ಸೂಚನೆ ನೀಡಿದೆ.ಏಪ್ರಿಲ್ 13ರವರೆಗೆ ಗ್ರೀನ್ ಮುಂಬೈ ಇಂಡಿಯನ್ಸ್ […]

Advertisement

Wordpress Social Share Plugin powered by Ultimatelysocial