ರಿಷಬ್‌ ಪಂತ್‌ಗೆ ಲಂಡನ್‌ನಲ್ಲಿ ನಡೆಯಲಿದೆ ಶಸ್ತ್ರಚಿಕಿತ್ಸೆ

ಪಘಾತದಲ್ಲಿ ಗಾಯಗೊಂಡಿರುವ ರಿಷಬ್‌ ಪಂತ್‌ರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಿಂದ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬುಧವಾರ ಅವರನ್ನು ಏರ್ ಲಿಫ್ಟ್‌ ಮಾಡುವ ಮೂಲಕ ಮುಂಬೈನ ಆಸ್ಪತ್ರೆಗೆ ಕರೆತರಲಾಗಿದೆ.ಇತ್ತೀಚಿನ ವರದಿಗಳ ಪ್ರಕಾರ ರಿಷಬ್‌ ಪಂತ್‌ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಂಡನ್‌ಗೆ ಕಳುಹಿಸಲಾಗುತ್ತದೆ.ಅಲ್ಲಿ ರಿಷಬ್ ಪಂತ್ ಮೊಣಕಾಲು ಮತ್ತು ಪಾದದ ಅಸ್ಥಿರಜ್ಜು ಮೇಲೆ ಎರಡು ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಆದರೆ, ಅವರನ್ನು ಯಾವಾಗ ಲಂಡನ್‌ಗೆ ಕರೆದೊಯ್ಯಲಾಗುತ್ತದೆ ಎಂದು ಇನ್ನೂ ತಿಳಿದುಬಂದಿಲ್ಲ. ಮುಂದಿನ 9 ತಿಂಗಳ ಕಾಲ ಅವರು ಕ್ರಿಕೆಟ್‌ನಿಂದ ಹೊರಗುಳಿಯಲಿದ್ದಾರೆ.ರಿಷಬ್‌ ಪಂತ್ ಬಾಹ್ಯ ಗಾಯಗಳ ಬಗ್ಗೆ ಸದ್ಯ ಹೆಚ್ಚಿನ ಗಮನ ಹರಿಸಲಾಗುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಡಾಕ್ಟರ್ ದಿನ್ಶಾ ಪರ್ದಿವಾಲಾ ನೇತೃತತ್ವದಲ್ಲಿ ಅಸ್ಥಿರಜ್ಜು ಗಾಯದ ಮೇಲೆ ಪಂತ್‌ಗೆ ಶಸ್ತ್ರಚಿಕಿತ್ಸೆ ಮುಂದುವರಿಯುತ್ತದೆ.”ರಿಷಬ್ ಪಂತ್ ಮೇಲೆ ಹೆಚ್ಚಿನ ಗಮನ ಹರಿಸುವುದನ್ನು ತಪ್ಪಿಸಲು ಮುಂಬೈನ ಆಸ್ಪತ್ರೆಗೆ ಕರೆತರಲಾಗಿದೆ. ಸದ್ಯ ಪಂತ್‌ಗೆ ಹೆಚ್ಚಿನ ವಿಶ್ರಾಂತಿಯ ಅಗತ್ಯವಿದೆ. ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಸಾಕಷ್ಟು ಜನರ ಓಡಾಟ ಇದ್ದ ಕಾರಣ ಅವರಿಗೆ ವಿಶ್ರಾಂತಿ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಮುಂಬೈನಲ್ಲಿ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಕುಟುಂಬದ ಸದಸ್ಯರಿಗೆ ಮಾತ್ರ ಅವರನ್ನು ಭೇಟಿ ಮಾಡಲು ಅವಕಾಶ ಇದೆ. ಗಾಯಗಳಿಂದ ಚೇತರಿಸಿಕೊಳ್ಳುತ್ತಿದ್ದಂತೆ, ಅವರ ಅಸ್ಥಿರಜ್ಜು ಗಾಯದ ಶಸ್ತ್ರಚಿಕಿತ್ಸೆ ಬಗ್ಗೆ ವೈದ್ಯರು ನಿರ್ಧರಿಸಲಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ ಇನ್‌ಸೈಡ್ ಸ್ಪೋರ್ಟ್ಸ್‌ ವರದಿ ಮಾಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬದುಕು ಸೇವಾ ಟ್ರಸ್ಟ್ ವತಿಯಿಂದ ಕ್ಯಾಲೆಂಡರ್ ಬಿಡುಗಡೆ.

Thu Jan 5 , 2023
ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರಿನಲ್ಲಿ ದಾಸ ಬಣಜಿಗ ಶ್ರೀರಾಮ ಮಂದಿರದಲ್ಲಿ ಬದುಕು ಸೇವಾಟ್ರಸ್ಟ್ ವತಿಯಿಂದ 7ನೇವರ್ಷದ 2023ನೇ ಸಾಲಿನ ನೂತನ ಕ್ಯಾಲೆಂಡರ್‌ ಅನ್ನು ಬಿಡುಗಡೆ ಮಾಡಲಾಯಿತು. ಕ್ಯಾಲೆಂಡರ್ ಬಿಡುಗಡೆ ಮಾಡಿ ‌ಪುರಸಭಾ ಸದಸ್ಯ ಶಶಿಧರ್ ಮಾತನಾಡಿ ಸಾಮಾಜಿಕ ಕಳಕಳಿಯಿಂದ ರಚನೆಯಾದ ಬದುಕು ಟ್ರಸ್ಟ್ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವ ಮೂಲಕ ಉತ್ತಮವಾದ ಕಾರ್ಯ ನಿರ್ವಹಿಸುತ್ತದೆ ಹಾಗಾಗಿ ಸಮುದಾಯದ ಹಿರಿಯರು ಈ‌ ಸಾಮಾಜಿಕ ಕೆಲಸಕ್ಕೆ ಕೈಜೋಡಿಸಬೇಕೆಂದು ಎಂದು ಹೇಳಿದರು. ರಾಮಾನುಜಾಚಾರ್ಯರ […]

Advertisement

Wordpress Social Share Plugin powered by Ultimatelysocial