ರೈತ ಮಹಿಳೆಯರಿಗೆ ಗುಡ್ ನ್ಯೂಸ್

ಧಾರವಾಡ: ಪಶುಪಾಲನಾ ಮತ್ತು ಪಶು ವೈದ್ಯಸೇವಾ ಇಲಾಖೆಯಿಂದ ಪ್ರಸಕ್ತ 2021-22ನೇ ಸಾಲಿಗಾಗಿ ವಿಸ್ತರಣಾ ಘಟಕ ಬಲಪಡಿಸುವಿಕೆ ಕಾರ್ಯಕ್ರಮದಡಿಯಲ್ಲಿ, ಹಿತ್ತಲು ಕೋಳಿ ಸಾಕಾಣಿಕೆ ಕೈಗೊಳ್ಳಲು ಆಸಕ್ತ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯಡಿಯಲ್ಲಿ ಒಂದು ಘಟಕಕ್ಕೆ ಆರು ವಾರಗಳ ವಯಸ್ಸಿನ ಐದು ಕೋಳಿ ಮರಿಗಳನ್ನು ವಿತರಿಸಲಾಗುವುದು. ಒಂದು ಘಟಕ ವೆಚ್ಚ 550 ರೂ. ಗಳಾಗಿರುತ್ತದೆ. ಜಿಲ್ಲೆಗೆ ಒಟ್ಟು 352 ಘಟಕಗಳ ಗುರಿ ನಿಗದಿ ಪಡಿಸಲಾಗಿದ್ದು, ಸರ್ಕಾರದ ನಿಯಮಾವಳಿಗಳನ್ವಯ ಫಲಾನುಭವಿಗಳ ಆಯ್ಕೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ದಿವ್ಯಾಂಗರಿಗೆ ಮೀಸಲಾತಿ ನೀಡಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿಗಳನ್ನು ಕಡ್ಡಾಯವಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಸಲ್ಲಿಸಬೇಕು. ಫಲಾನುಭವಿಗಳನ್ನು ಸರ್ಕಾರದ ನಿಯಮಾಳಿಗಳನ್ವಯ ಆಯ್ಕೆ ಮಾಡಿ ಜಿಲ್ಲಾ ಪಂಚಾಯತ ಅನುಮೋದನೆ ಪಡೆದು ಯೋಜನೆ ಅನುಮೋದನೆಗೊಳಿಸಲಾಗುವುದು. ಆಸಕ್ತರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅರ್ಜಿಗಳಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜನವರಿ 10, 2022 ರ ಒಳಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಸಲ್ಲಿಸುವಂತೆ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸಾವಿರಾರು ಗೀತೆ ಹಾಡಿದ್ದ ಖ್ಯಾತ ಗಾಯಕ ಮಾಣಿಕ ವಿನಾಯಗಂ ನಿಧನ

Mon Dec 27 , 2021
ತಮಿಳು ಸಿನಿಮಾರಂಗದ ಖ್ಯಾತ ಗಾಯಕ ಮಾಣಿಕ ವಿನಾಯಗಂ ವಿಧಿವಶರಾಗಿದ್ದಾರೆ. ಭಾನುವಾರ (ಡಿ.26) ರಾತ್ರಿ ಅವರು ಕೊನೆಯುಸಿರು ಎಳೆದರು. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಮಾಣಿಕ ವಿನಾಯಗಂ ನಿಧನಕ್ಕೆ ಸೂಕ್ತ ಕಾರಣ ಏನೆಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಅವರ ಅಗಲಿಕೆಗೆ ತಮಿಳು ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದ್ದಿದ್ದಾರೆ. ನಾಟ್ಯಾಚಾರ್ಯ ಪದ್ಮಶ್ರೀ ವಳುವೂರ್​ ಬಿ ರಾಮಯ್ಯ ಪಿಳೈ ಅವರ ಕಿರಿಯ ಪುತ್ರನಾಗಿದ್ದ […]

Advertisement

Wordpress Social Share Plugin powered by Ultimatelysocial