ಗಡ್ಡೋಬನಹಳ್ಳಿ ಗ್ರಾಮಸ್ಥರ ಮನವಿಯ ಮೇರೆಗೆ ತನ್ನ ಸ್ವಂತ ಹಣದಿಂದಲೇ ರಸ್ತೆಯ ಎರಡು ಬದಿಯ ಜಂಗಲ್ ದುರಸ್ಥಿಗೆ ಬಿಜೆಪಿ ಮುಖಂಡ ಮುಂದಾಗಿರುವ ಘಟನೆ ಮಂಗಳವಾರ ನಡೆದಿದೆ.ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ತೀತಾ ಗ್ರಾಪಂ ವ್ಯಾಪ್ತಿಯ ಮೇಳೆಹಳ್ಳಿ ಕ್ರಾಸಿನಿಂದ ಗಡ್ಡೋಬನಹಳ್ಳಿ ಗ್ರಾಮದವರೇಗೆ ರಸ್ತೆದುರಸ್ಥಿ ಕೆಲಸ ನಡೆಯುತ್ತೀದೆ.ಮೇಳೆಹಳ್ಳಿ ಕ್ರಾಸಿನಿಂದ ಗಡ್ಡೋಬನಹಳ್ಳಿಗೆ 2ಕೀಮೀ ಮತ್ತು ಗಡ್ಡೋಬನಹಳ್ಳಿ ಗ್ರಾಮದ ಮಧ್ಯವೆಂಕಟಾಪುರ ಕ್ರಾಸಿಗೆ 3ಕೀಮೀ ರಸ್ತೆ ದುರಸ್ಥಿ ಕೆಲಸ ಪ್ರಾರಂಭವಾಗಿದೆ.ಗಡ್ಡೋಬನಹಳ್ಳಿ ಗ್ರಾಮದಲ್ಲಿ ಒಟ್ಟು100 ಕುಟುಂಬಗಳಿದ್ದು 450ಕ್ಕೂ ಅಧಿಕ ಮತದಾರರು ಇದ್ದಾರೆ. ಪ್ರತಿನಿತ್ಯ 30ಕ್ಕೂ ಅಧಿಕ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಸಂಚಾರ ನಡೆಸುತ್ತಾರೆ.5ಕೀಮೀ ಸಂಪರ್ಕದ ರಸ್ತೆಯಲ್ಲಿ ಜಂಗಲ್ ಬೆಳೆದು ರಸ್ತೆಯೇ ಮಾಯವಾಗಿ ರೈತರು ಮತ್ತು ವಿದ್ಯಾರ್ಥಿಗಳು ಸಂಚರಿಸುವಾಗ ಭಯದ ವಾತವರಣ ನಿರ್ಮಾಣ ಆಗಿತ್ತು.ಕೊರಟಗೆರೆ ಬಿಜೆಪಿ ಮುಖಂಡ ಗಡ್ಡೋಬನಹಳ್ಳಿ ಗ್ರಾಮಕ್ಕೆ ಬೇಟಿ ನೀಡಿದಾಗ ಗ್ರಾಮಸ್ಥರು ರಸ್ತೆಯ ದುರಸ್ಥಿಗೆ ಮನವಿ ಮಾಡಿದ್ದಾರೆ. ತಕ್ಷಣವೇ ಗ್ರಾಮಸ್ಥರ ಮನವಿಗೆ ಸ್ಪಂಧಿಸಿದ ಅನಿಲ್ ಕುಮಾರ್ ಮಾರನೇಯ ದಿನವೇ ರಸ್ತೆ ದುರಸ್ಥಿ ಕೆಲಸಕ್ಕೆ ಮುಂದಾಗಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.
https://play.google.com/store/apps/details?id=com.speed.newskannada