ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಏಕದಿನ ಸರಣಿ ಮಂಗಳವಾರದಿಂದ ಆರಂಭವಾಗಲಿದ್ದು ಎರಡು ತಂಡಗಳು ಕೂಡ ಈ ಪಂದ್ಯಕ್ಕೆ ಸಜ್ಜಾಗಿದೆ. ಮೊದಲ ಏಕದಿನ ಪಂದ್ಯ ಗುವಾಹಟಿಯಲ್ಲಿ ನಡೆಯಲಿದ್ದು ಅಹರ್ನಿಶಿಯಾಗಿ(Day-night) ನಡೆಯಲಿದೆ. ಈ ಪಂದ್ಯಕ್ಕೂ ಮುನ್ನಾ ದಿನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.ಈ ಸಂದರ್ಭದಲ್ಲಿ ರೋಹಿತ್ ಶರ್ಮಾ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕರಾಗಿ ತಮ್ಮ ಜೊತೆಗೆ ಶುಬ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ ಎಂದಿದ್ದಾರೆ.ಟೀಮ್ ಇಂಡಿಯಾ ನಾಯಕನ ಈ ನಿರ್ಧಾರದ ಬಗ್ಗೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಕನ್ನಡಿದ ವೆಂಕಟೇಶ್ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅದ್ಭುತ ಫಾರ್ಮ್ನಲ್ಲಿರುವ ಇಶಾನ್ ಕಿಶನ್ ಅವರನ್ನು ತಂಡದಿಂದ ಹೊರಗಿಡುವ ನಿರ್ಧಾರದ ಬಗ್ಗೆ ವೆಂಕಿ ಸಾಮಾಜಿಕ ಜಾಲತಾಣದಲ್ಲಿ ಕಟುವಾಗಿ ಟೀಕಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಆಟಗಾರರ ಆಯ್ಕೆಯ ಕ್ರಮದ ಬಗ್ಗೆಯೂ ಪ್ರಶ್ನೆಯೆತ್ತಿದ್ದಾರೆ.ದ್ವಿಶತಕ ಸಿಡಿಸಿ ಅಬ್ಬರಿಸಿದ್ದ ಇಶಾನ್ ಕಿಶನ್ಯು ವ ಆಟಗಾರ ಇಶಾನ್ ಕಿಶನ್ ಇತ್ತೀಚೆಗಷ್ಟೇ ಅಂತ್ಯವಾದ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿಸಿದ್ದರು. ಸರಣಿಯ ಮೂರನೇ ಪಂದ್ಯದಲ್ಲಿ ಅಮೋಗ ಪ್ರದರ್ಶನ ನೀಡಿದ ಇಶಾನ್ ಕಿಶನ್ ಸ್ಪೋಟಕ ಶತಕ ಸಿಡಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣವಾದರು. ಹೀಗಾಗಿ ಈ ಪಂದ್ಯದಲ್ಲಿ ಭಾರತ 400ಕ್ಕೂ ಅಧಿಕ ರನ್ಗಳಿಸಿದ್ದಲ್ಲದೆ ಭಾರೀ ಅಂತರದಿಂದ ಗೆಲುವು ಸಾಧಿಸಲು ಸಾಧ್ಯವಾಗಿತ್ತು. ಈ ಭರ್ಜರಿ ಆಟಗಾರ ಬಳಿಕ ಟೀಮ್ ಇಂಡಿಯಾದ ಏಕದಿನ ತಂಡದಲ್ಲಿ ಆರಂಭಿಕನಾಗಿ ಮುಂದುವರಿಯಲು ಇಶಾನ್ ಕಿಶನ್ ಸೂಕ್ತ ಆಟಗಾರ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು.
https://play.google.com/store/apps/details?id=com.speed.newskannada