ಸ್ನೇಹಿತನ ಕೊಲೆ ಪ್ರಕರಣದಲ್ಲಿ ಕುಖ್ಯಾತ ರೌಡಿಶೀಟರ್ ಆರ್ಮುಗಂ ಮತ್ತೆ ಕೊಲೆ ಮಾಡಿ ಜೈಲು ಸೇರಿದ್ದಾನೆ. ತನ್ನ 2,500 ರೂಪಾಯಿ ಕದ್ದ ಶಂಕೆಯಿಂದ ಸ್ನೇಹಿತ ಭೀಮಪ್ಪ ಹುಸೇನ್ ನನ್ನು ಆರ್ಮುಗಂ ಕೊಲೆ ಮಾಡಿದ್ದಾನೆ. ಈ ಪ್ರಕರಣ ಸಂಬಂಧ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಆರ್ಮುಗಂನನ್ನು ಬಂಧಿಸಿದ್ದಾರೆ.ಇವರೆಗೂ 2-3 ಕೊಲೆ ಕೇಸ್ ನಲ್ಲಿ ಜೈಲಿಗೆ ಹೋಗಿರುವ ಆರ್ಮುಗಂ ಇದೀಗ ತನ್ನ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ.ತನ್ನ ಸ್ನೇಹಿತ ಭೀಮಪ್ಪ ಹುಸೇನ್ ಜೊತೆ ಪಾರ್ಟಿ ಮಾಡಿದ್ದ ಆರ್ಮುಗಂನ 2,500 ಮಿಸ್ಸಿಂಗ್ ಆಗಿತ್ತು. ಆಗ ತನ್ನ ಸ್ನೇಹಿತ ಭೀಮಪ್ಪನೇ ಕದ್ದಿರಬೇಕೆಂಬ ಅನುಮಾನ ವ್ಯಕ್ತವಾಗಿ ಮಾತಿನ ಚಕಮಕಿ ನಡೆದಿದ್ದೆ. ಮಾತಿಗೆ ಮಾತು ಬೆಳೆದು ಆರ್ಮುಗಂ ಸ್ನೇಹಿತನ ತಲೆ ಮೇಲೆ ಹಾಲೋಬ್ಲಾಕ್ ಇಟ್ಟಿಗೆ ಹಾಕಿ ಕೊಲೆ ಮಾಡಿದ್ದಾನೆ.
ಇದನ್ನೂ ಓದಿ:“ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ