ಹಿಂದೂಗಳಲ್ಲಿ ಒಗ್ಗಟ್ಟಿನ ಅಗತ್ಯವನ್ನು ಒತ್ತಿ ಹೇಳಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು, ಹಿಂದೂಗಳಲ್ಲಿ ಸಾಮಾಜಿಕ ಸಮಾನತೆಯ ಅಗತ್ಯವಿದ್ದು, ಐಕ್ಯತೆಗೆ ಜಾತೀಯತೆ ಅಡ್ಡಿಯಾಗುತ್ತಿದೆ ಎಂದು ಹೇಳಿದ್ದಾರೆ.
ಬುಧವಾರ ಸಂಜೆ ವಿವಿಧ ಕ್ಷೇತ್ರಗಳ ಆಯ್ದ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಆರಂಭದಿಂದಲೂ, RSS ಹಿಂದೂ ಧರ್ಮದ ಪ್ರಾಚೀನ ಮೌಲ್ಯಗಳನ್ನು ಎತ್ತಿ ಹಿಡಿದಿದ್ದು, ಇದು ವಿವಿಧತೆಯಲ್ಲಿ ಏಕತೆ, ಮಾನವೀಯತೆ ಮತ್ತು ವ್ಯಕ್ತಿತ್ವದ ಜೀವನವನ್ನು ಹೊಂದಿದೆ. ಸಂಘವು ‘ಜನನಿ’ ಮತ್ತು ‘ಜನ್ಮ ಭೂಮಿ’ (ತಾಯಿ ಮತ್ತು ಮಾತೃಭೂಮಿ)ಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಮತ್ತು ಎರಡರ ಪವಿತ್ರತೆಯನ್ನು ರಕ್ಷಿಸಲು ಸಾಧ್ಯವಿರುವ ಎಲ್ಲಾ ಪ್ರಯತ್ನವನ್ನು ಮಾಡುತ್ತಿದೆ ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada