‘ರುಧೀರ ಕಣಿವೆ’ ಚಿತ್ರದ ಟೀಸರ್&ಹಾಡುಗಳು ರಿಲೀಸ್‌

ಕನ್ನಡದಲ್ಲೀಗ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗುತ್ತಿವೆ. ಇದೀಗ ‘ರುಧೀರ ಕಣಿವೆ’ ಎಂಬ ವಿಭಿನ್ನ ಶೀರ್ಷಿಕೆಯುಳ್ಳ ಸಿನಿಮಾವೊಂದು ತೆರೆಗೆ ಸಿದ್ಧವಾಗಿದ್ದು, ಇದು ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆಯಂತೆ. ಅಂದಹಾಗೆ, ಈ ಸಿನಿಮಾ ಡಿ.30ರಂದು ರಿಲೀಸ್ ಆಗಲಿದೆ. ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಪುನರ್ಜನ್ಮದ ಪ್ರೇಮಕಥೆಯನ್ನು ಒಳಗೊಂಡ ‘ರುಧೀರ ಕಣಿವೆ’ ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತುಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್ ಟೀಸರ್ ಬಿಡುಗಡೆ ಮಾಡಿದರು. ‘ಈ ಸಿನಿಮಾದ ಹಾಡುಗಳು ಚೆನ್ನಾಗಿವೆ ಜೊತೆಗೆ ಛಾಯಾಗ್ರಹಣ, ಮ್ಯೂಸಿಕ್ ಕೂಡ ಅದ್ಭುತವಾಗಿದೆ. ಇದೊಂದು ಉತ್ತಮ ತಂಡವಾಗಿದ್ದು, ಒಳ್ಳೆಯ ಸಿನಿಮಾ ಮಾಡಿದ್ದಾರೆಂಬ ಭರವಸೆಯಿದೆ..’ ಎಂದು ಭಾ.ಮ. ಹರೀಶ್ ಹೇಳಿದರು. ಹಾಗೆಯೇ ನಟ ಧರ್ಮ ಕೀರ್ತಿರಾಜ್ ಅವರು ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. ‘ಈ ಸಿನಿಮಾದ ಚಿತ್ರದ ತುಣುಕುಗಳನ್ನು ನೋಡಿದರೆ, ಇದೊಂದು ವಿಶೇಷವಾದ ಸಿನಿಮಾ ಎನಿಸುತ್ತದೆ..’ ಎಂದು ಹೇಳಿದರು. ಚಿತ್ರ ತಂಡಕ್ಕೆ ಶುಭ ಹಾರೈಸಲು ಬಂದಿದ್ದ ಪ್ರತಾಪ್ ಸಿಂಹ ‘ಈ ಟೈಟಲ್ ತುಂಬಾ ಚೆನ್ನಾಗಿ ಇದೆ. ತಂಡಕ್ಕೆ ಒಳ್ಳೆದಾಗಲಿ’ ಎಂದರು’ರುಧೀರ ಕಣಿವೆ’ ಚಿತ್ರಕ್ಕೆ ಸಮರ್ಥ ಎಂ ಎಂಬುವವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಇದು ಇವರ ಎರಡನೇ ಸಿನಿಮಾ. ‘ಈ ಮೊದಲು ನಾನು ‘ನವ ಇತಿಹಾಸ’ ಸಿನಿಮಾವನ್ನು ನಿರ್ದೇಶನ ಮಾಡಿದ್ದೆ. ಆರಂಭದಿಂದಲೂ ಈ ಚಿತ್ರಕ್ಕೆ ತುಂಬಾ ತೊಂದರೆ ಬಂದಿದೆ. ಆದರೂ ನಿರ್ಮಾಪಕರು ಹಾಗೂ ಕಲಾವಿದರು ನಮಗೆ ಒಳ್ಳೆಯ ಬೆಂಬಲ ನೀಡಿದ್ದಾರೆ. ಈ ಚಿತ್ರದಲ್ಲಿ 4 ಫೈಟ್, 4 ಹಾಡುಗಳಿವೆ. ಬೆಂಗಳೂರು, ರಾಮನಗರ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಸಾರ್ವಜನಿಕ ಶೌಚಾಲಗಳಿಗೆ ಬೀಗ!

Mon Dec 26 , 2022
ತಾಲ್ಲೂಕು ಕಚೇರಿ ಆವರಣದಲ್ಲಿರುವ ಸಾರ್ವಜನಿಕರ ಅನುಕೂಲಕ್ಕೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಆದರೆ ನಿರ್ವಹಣೆ ಮಾಡುವಲ್ಲಿ ಪುರಸಭೆ ಅಧಿಕಾರಿಗಳ ನಿರ್ಲಕ್ಷತನದಿಂದ ಸುಮಾರು 3-4 ತಿಂಗಳಿನಿಂದ ಬೀಗ ಜಡಿಯಲಾಗಿದ್ದು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಪ್ರತಿನಿತ್ಯ ಹಳ್ಳಿಗಳಿಂದ ನೂರಾರು ಸಾರ್ವಜನಿಕರು ತಮ್ಮ ಕೆಲಸಗಳಿಗೆ ತಾಲ್ಲೂಕು ಕಚೇರಿಗೆ ಆಗಮಿಸುತ್ತಾರೆ ಸಾರ್ವಜನಿಕರು ಶೌಚಾಲಯಕ್ಕೆ ಹೋಗಬೇಕಾದರೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಹೋಗಬೇಕಾದ […]

Advertisement

Wordpress Social Share Plugin powered by Ultimatelysocial