ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣಕ್ಕೆ ಇಂದು ಆರೋಗ್ಯ ಸಚಿವ ಶ್ರೀರಾಮುಲು ಭೇಟಿ ನೀಡಿ ಕೊರೊನಾ ತಡೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ, ಸಾರ್ವಜನಿಕರಿಗೆ ಮಾಸ್ಕ್ ವಿತರಿಸಲಾಯಿತು. ಈ ಸಂದರ್ಭ ಆರೋಗ್ಯ ಸಚಿವರು ಸಾಮಾಜಿಕ ಅಂತರದ ನಿಯಮವನ್ನು ಗಾಳಿಗೆ ತೂರಿದರು. ತಾವು ಮಾಸ್ಕ್ ಧರಿಸದೇ, ಸ್ಯಾನಿಟೈಸರ್ ಬಳಸದೇ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿದರು. ಈ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಸಚಿವರೇ ನಿಯಮ ಉಲ್ಲಂಘಿಸಿದ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ.
ರಾಜ್ಯ ಸರ್ಕಾರ ಲಾಕ್ ಡೌನ್ ನಡುವೆಯೂ ಕೆಲ ವಿನಾಯಿತಿ ನೀಡಿದೆ. ಆದರೆ, ಸಾಮಾಜಿಕ ಅಂತರವನ್ನು ಸ್ಪಷ್ಟವಾಗಿ ಕಾಯ್ದುಕೊಳ್ಳುವಂತೆ ಮತ್ತೆ ಮತ್ತೆ ಮನವಿ ಮಾಡುತ್ತಲೇ ಇದೆ. ಈ ಹೊಣೆಯನ್ನು ಸ್ಪಷ್ಟವಾಗಿ ಪಾಲಿಸಿ, ಇತರರಿಗೂ ಮಾದರಿಯಾಗ ಬೇಕಾದ ಆರೋಗ್ಯ ಸಚಿವರೇ ಇಂದು ನಿಯಮ ಉಲ್ಲಂಘಿಸಿದ್ದು, ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿದೆ,
ರೂಲ್ಸ್ ಪಾಲಿಸಬೇಕಾದ ಸಚಿವರೇ ರೂಲ್ಸ್ ಗಳನ್ನ ಮರೆತ್ತಿದ್ದಾರೆ
Please follow and like us: