“ರೂಪಾಯಿ” ಚಿತ್ರದಲ್ಲಿ ಬಂತು “ಖಾರಾಬಾತ್” ಹಾಡು..

ಕುತೂಹಲ ಹುಟ್ಟಿಸಿರುವ ಈ ಚಿತ್ರ ಫೆಬ್ರವರಿ 10ರಂದು ತೆರೆಗೆ .

“ಖಾರಾಬಾತ್” ಸಾಮಾನ್ಯವಾಗಿ ಎಲ್ಲರಿಗೂ ಪ್ರಿಯವಾಗುವ ಖಾದ್ಯ. ಈ “ಖಾರಾಬಾತ್” ಅನ್ನು ಕೇಂದ್ರವಾಗಿಟ್ಟುಕೊಂಡೆ ವಿಜಯ್ ಜಗದಾಲ್ “ರೂಪಾಯಿ” ಚಿತ್ರಕ್ಕೆ ಹಾಡೊಂದನ್ನು ಬರೆದಿದ್ದಾರೆ. ಖ್ಯಾತ ಗಾಯಕಿ ಸುಪ್ರಿಯಾ ರಾಮ್ ಈ ಹಾಡನ್ನು ಹಾಡಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪ್ರಸಿದ್ದ ಹೋಟೆಲ್ ನಲ್ಲಿ “ಖಾರಾಬಾತ್” ಖರ್ಚಾಗುವ ಹಾಗೆ, ಈ ಹಾಡು ಕೂಡ ಜನರ ಮನ ಗೆಲ್ಲುತ್ತಿದೆ‌. ಆನಂದ್ ರಾಜ್ ವಿಕ್ರಮ್ ಸಂಗೀತ ನೀಡಿದ್ದಾರೆ.

ವಿಜಯ್ ಜಗದಾಲ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಜೊತೆಗೆ ನಾಯಕನಾಗೂ ನಟಿಸಿದ್ದಾರೆ. ಕೃಷಿ, ತಾಪಂಡ, ಚಂದನ ರಾಘವೇಂದ್ರ, ಮೈತ್ರಿ ಜಗದೀಶ್, ರಾಮ್ ಚಂದನ್, ಪ್ರಮೋದ್ ಶೆಟ್ಟಿ, ಅನಿಲ್ ಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ.

ಇತ್ತೀಚೆಗೆ ಚಿತ್ರದ ಮೋಷನ್ ಪೋಸ್ಟರ್ ಡಾಲಿ ಧನಂಜಯ ಬಿಡುಗಡೆ ಮಾಡಿದ್ದರು.

“ರೂಪಾಯಿ” ಮಹತ್ವ ಸಾರುವ ಈ ಚಿತ್ರದಲ್ಲಿ, ಕಾಮಿಡಿ, ಸೆಂಟಿಮೆಂಟ್ ಹೀಗೆ ಎಲ್ಲಾ ಅಂಶಗಳು ಒಳಗೊಂಡಿದೆ. ಚಿತ್ರದ ಟ್ರೇಲರ್ ಫೆಬ್ರವರಿ 1 ರಂದು ರಿಲೀಸ್ ಆಗಲಿದೆ. ಕುತೂಹಲ ಹುಟ್ಟಿಸಿರುವ ಈ ಚಿತ್ರ ಫೆಬ್ರವರಿ 10ರಂದು ತೆರೆಗೆ ಬರಲಿದೆ.

ವಿವಿಧ್ ಸಿನಿಮಾಸ್ ಲಾಂಛನದಲ್ಲಿ ಮಂಜುನಾಥ್ ಎಂ, ಹರೀಶ್ ಬಿ.ಕೆ ಮತ್ತು ವಿನೋದ್ ಎನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಆರ್ ಡಿ ನಾಗಾರ್ಜುನ ಛಾಯಾಗ್ರಹಣ, ಹಾಗೂ ಶಿವರಾಜ್ ಮೇಹು ಸಂಕಲನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಸುನಿವಿನಿ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿನಿಮಾಗಳ 'ಬಾಯ್ಕಾಟ್ ಸಂಸ್ಕೃತಿ' ವಾತಾವರಣವನ್ನು ಹಾಳುಮಾಡುತ್ತದೆ.

Sat Jan 28 , 2023
ಕೆಲವು ಚಲನಚಿತ್ರಗಳನ್ನು ಗುರಿಯಾಗಿಸಿಕೊಂಡು “ಬಹಿಷ್ಕಾರ ಸಂಸ್ಕೃತಿ” ಯನ್ನು ಹಾಕುವುದನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಖಂಡಿಸಿದ್ದಾರೆ. ನವದೆಹಲಿ: ಕೆಲವು ಚಲನಚಿತ್ರಗಳನ್ನು ಗುರಿಯಾಗಿಸಿಕೊಂಡು “ಬಹಿಷ್ಕಾರ ಸಂಸ್ಕೃತಿ” ಯನ್ನು ಹಾಕುವುದನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಖಂಡಿಸಿದ್ದಾರೆ, ಭಾರತವು ಮೃದು ಶಕ್ತಿಯಾಗಿ ತನ್ನ ಪ್ರಭಾವವನ್ನು ಹೆಚ್ಚಿಸಲು ಉತ್ಸುಕರಾಗಿರುವ ಸಮಯದಲ್ಲಿ ಇಂತಹ ನಿದರ್ಶನಗಳು ವಾತಾವರಣವನ್ನು ಹಾಳುಮಾಡುತ್ತವೆ ಎಂದು ಅವರು ಹೇಳಿದ್ದಾರೆ. ಒಂದು ವೇಳೆ […]

Advertisement

Wordpress Social Share Plugin powered by Ultimatelysocial