ಕಳೆದ ಭಾನುವಾರ ಸಂಜೆ ಬೇಲೂರಿನ ತಮ್ಮ ಮನೆಯಲ್ಲಿ ಕುಸಿದು ಬಿದ್ದು ಸಾಲುಮರದ ತಿಮ್ಮಕ್ಕ ಅವರ ಸೊಂಟದ ಮೂಳೆ ಮುರಿದು ಹೋದ ಹಿನ್ನೆಲೆ, ಬೆಂಗಳೂರಿನ ಜಯನಗರ ಆಸ್ಪತ್ರೆಯಲ್ಲಿ ಸೊಂಟಕ್ಕೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು ,ಅನಾರೋಗಕ್ಕೆ ತುತ್ತಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಸಾಲು ಮರದ ತಿಮ್ಮಕ್ಕ ಈಗ ಸ್ವಲ್ಪ ಮಟ್ಟಿಗೆ ಚೇತರಿಕೆ ಕಾಣುತಿದ್ದು ಕುಟುಂಬಸ್ಥರಿಗೆ ಹಾಗೂ ಅವರ ಅಭಿಮಾನಿಗಳಿಗೆ ಸಂತಸ ಮೂಡಿದೆ ..ಇನ್ನು ಯಾವುದೇ ತೊಂದರೆ ಇಲ್ಲದೆ ನಿಧಾನವಾಗಿ ಚೇತರಿಕೆ ಕಾಣುತ್ತಿರುವ ಸಾಲುಮರದ ತಿಮ್ಮಕ್ಕ ಸದ್ಯದಲ್ಲೇ ಸುಧಾರಿಸಿಕೊಳ್ಳಲಿದ್ದಾರೆ ಎಂದು ವೈದ್ಯರು ಅಭಿಪ್ರಾಯ ಹೊರಹಾಕಿದ್ದಾರೆ..
ಇದನ್ನೂ ಓದಿ : ಸರ್ಕಾರದ ವಿರುದ್ದ ಸಾರಿಗೆ ನೌಕರರು ಆಕ್ರೋಶ..!!