ಬೆಂಗಳೂರು,ಡಿ.28- ರಾಜ್ಯ ವಿಧಾನಮಂಡಲದ 2021-22ನೇ ಸಾಲಿನ ವಿಧಾನಮಂಡಲ ಮತ್ತು ವಿಧಾನಸಭೆಯ ವಿವಿಧ ಸ್ಥಾನ ಸಮಿತಿಗಳನ್ನು ರಚಿಸಲಾಗಿದೆ. ಉಭಯ ಸಾದನಗಳ ಜಂಟಿ ಸಮಿತಿಗಳಾದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ಕುಮಾರ್ ಅಧ್ಯಕ್ಷರಾಗಿದ್ದು, 15 ಶಾಸಕರು ಸಮಿತಿಯ ಸದಸ್ಯರಾಗಿದ್ದಾರೆ.
ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಹುದ್ದೆಗಳ ಸಮಿತಿ ರಚನೆಯಾಗಿದ್ದು, 15 ಮಂದಿ ಶಾಸಕರು ಸಮಿತಿಯ ಸದಸ್ಯರಾಗಿದ್ದಾರೆ. ಶಾಸಕ ಎಂ.ಪಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯಲ್ಲಿ 15 ಶಾಸಕರು ಸದಸ್ಯರಾಗಿದ್ದಾರೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಥಾಯಿ ಸಮಿತಿಗಳನ್ನು ನೇಮಕ ಮಾಡಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಶಾಸಕ ಎಸ್.ಕುಮಾರ್ ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ , ಶಾಸಕ ಎಲ್.ಎ.ರವಿಸುಬ್ರಹ್ಮಣ್ಯ ಅಧ್ಯಕ್ಷತೆಯಲ್ಲಿ ಲೀನ ಶಾಸನ ರಚನಾ ಸಮಿತಿ, ಶಾಸಕ ಸಾ.ರಾ.ಮಾಹೇಶ್ ಅಧ್ಯಕ್ಷತೆಯಲ್ಲಿ ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ ಹಾಗೂ ಶಾಸಕರಾದ ಕೆ.ಪೂರ್ಣಿಮಾ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಕಲ್ಯಾಣ ಸಮಿತಿಯನ್ನು ಸಭಾಧ್ಯಕ್ಷರು ನೇಮಕ ಮಾಡಿದ್ದಾರೆ.
ವಿಧಾನಸಭೆ ಸಮಿತಿಗಳಾದ ಅಂದಾಜುಗಳ ಸಮಿತಿಗೆ ಶಾಸಕ ಅಭಯ್ಪಾಟೀಲ್ ಅಧ್ಯಕ್ಷರಾಗಿದ್ದಾರೆ. ಸರ್ಕಾರಿ ಭರವಸೆಗಳ ಸಮಿತಿಗೆ ಶಾಸಕ ಕೆ.ರಘುಪತಿಭಟ್, ಗ್ರಂಥಾಲಯ ಸಮಿತಿಯ ಅಧ್ಯಕ್ಷರಾಗಿ ವಿಧಾನಪರಿಷತ್ನ ಸಭಾಪತಿ ಬಸವರಾಜು ಹೊರಟ್ಟಿ ಅವರು ಅಧ್ಯಕ್ಷರಾಗಿರುತ್ತಾರೆ.
ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿ ಅಧ್ಯಕ್ಷರಾಗಿ ಶಾಸಕ ಜಿ.ಸೋಮಶೇಖರರೆಡ್ಡಿ, ಹಕ್ಕುಬಾಧ್ಯತೆಗಳ ಅಧ್ಯಕ್ಷರಾಗಿ ಶಾಸಕ ಬಸನಗೌಡ ಆರ್.ಪಾಟೀಲ್ ಯತ್ನಾಳ್, ಖಾಸಗಿ ಸದಸ್ಯರ ವಿಧೇಯಕ ನಿರ್ಣಯ ಸಮಿತಿ ಮತ್ತು ಅರ್ಜಿಗಳ ಸಮಿತಿ, ವಸತಿ ಸೌಕರ್ಯ ಸಮಿತಿ ಅಧ್ಯಕ್ಷರಾಗಿ ವಿಧಾನಭೆಯ ಉಪಾಸಭಾಧ್ಯಕ್ಷರಾದ ಆನಂದ್ ಅಲಿಯಾಸ್ ವಿಶ್ವನಾಥ್ ಚಂದ್ರಶೇಖರ್ ಮಹಾಮನಿ ನೇಮಕಗೊಂಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: