ಶಬರಿಮಲೆ ದೇಗುಲದಲ್ಲಿ ಭಕ್ತರ ತಳ್ಳಾಡಿದ ಸಿಬ್ಬಂದಿ ವಿಡಿಯೋ ವೈರಲ್.

ಬರಿಮಲೆ ದೇಗುಲದಲ್ಲಿ ಭಕ್ತರನ್ನು ಸಿಬ್ಬಂದಿಯೊಬ್ಬರು ಹಲ್ಲೆ ನಡೆಸುವ ರೀತಿಯಲ್ಲಿ ತಳ್ಳಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ ಹೈಕೋರ್ಟ್ ಸೂಚಿಸಿದೆ.

ಜನವರಿ 14ರಂದು ಈ ಘಟನೆ ನಡೆದಿದ್ದು, ಅರುಣ್ ಎಂಬ ಸಿಬ್ಬಂದಿ ಭಕ್ತರನ್ನು ಹಲ್ಲೇ ನಡೆಸುವ ರೀತಿಯಲ್ಲಿ ತಳ್ಳಾಡಿದ್ದರು.

ಈ ವಿಡಿಯೋ ವೈರಲ್ ಆದ ಬಳಿಕ ಇದನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್ ಈ ಸೂಚನೆ ನೀಡಿದೆ.

ಅಲ್ಲದೆ ದೇವಸ್ಥಾನಕ್ಕೆ ಭಕ್ತರು ನೀಡಿರುವ ಕಾಣಿಕೆ ಮತ್ತು ಇತರೆ ದೇಣಿಗೆ ಎಣಿಕೆ ವೇಳೆ ಯಾವುದಾದರೂ ಲೋಪ ಸಂಭವಿಸಿದೆಯೇ ಎಂಬುದರ ಕುರಿತೂ ಮಾಹಿತಿ ನೀಡುವಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ ಹೈಕೋರ್ಟ್ ತಿಳಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿರುವ ಧಾರವಾಡದ ಐಐಟಿಯಲ್ಲಿ ಕಳ್ಳತನ.

Fri Jan 20 , 2023
ಧಾರವಾಡ, ಜನವರಿ, 20: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಬೇಕಾಗಿರುವ ಧಾರವಾಡ ಐಐಟಿ ಕೇಂದ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಕಳ್ಳತನವೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಹದ್ದಿನಲ್ಲಿ ಬರುವ ಐಐಟಿ ಕಟ್ಟಡದ ಕಾಮಗಾರಿ ಈಗಾಗಲೇ ಮುಗಿಯುವ ಹಂತದಲ್ಲಿದೆ. ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿಗೆ ಬಂದಾಗಲೇ ಇದರ ಉದ್ಘಾಟನೆ ಆಗಬೇಕಿತ್ತು. ಆದರೆ, ಕೆಲ ಕಾಮಗಾರಿ ಬಾಕಿ ಇದ್ದುದ್ದರಿಂದ ಇದರ ಉದ್ಘಾಟನೆ ಇದೀಗ ಫೆಬ್ರವರಿ ತಿಂಗಳಿಗೆ […]

Advertisement

Wordpress Social Share Plugin powered by Ultimatelysocial