ಕಳೆದ ಬಾರಿ ನನಗೆ ಸಚಿವ ಸ್ಥಾನ ತಪ್ಪಿ ಹೋಗಿತ್ತು ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗುತ್ತದೆ.ನಾನು ಸಚಿವ ಸ್ಥಾನ ಕೊಡಿ ಎಂದು ಇನ್ನು ಕೇಳುವುದಿಲ್ಲ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ.ಕಾಗವಾಡದಲ್ಲಿ ಮಾತನಾಡಿದ ಪಾಟೀಲ್, ನಿನಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ನಮ್ಮ ಪಕ್ಷದ ನಾಯಕರು ಭರವಸೆ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಸಚಿವ ಸ್ಥಾನದ ಬಗ್ಗೆ ಮಾತನಾಡುವುದಿಲ್ಲ ಎಂದು ಶ್ರೀಮಂತ ಪಾಟೀಲ್ ಹೇಳಿದ್ದಾರೆ.ನಾನು ಸಚಿವ ಸ್ಥಾನದ ಆಕಾಂಕ್ಷಿ. ಈ ಹಿನ್ನೆಲೆಯಲ್ಲಿ ಈ ಹಿಂದೆ ಈ ಬಗ್ಗೆ ಮಾತನಾಡಿದ್ದೆ. ಆದರೆ ಈಗ ನಮ್ಮ ನಾಯಕರು ಭರವಸೆ ನೀಡಿದ್ದಾರೆ.ಹೀಗಾಗಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಆದ್ದರಿಂದ ನಾನು ಈ ಬಗ್ಗೆ ಮಾತನಾಡಿ, ವಿವಾದಕ್ಕೆ ಕಾರಣವಾಗುವುದಿಲ್ಲ ಎಂದು ಶ್ರೀಮಂತ ಪಾಟೀಲ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada