‘ಪುಷ್ಪ’ ಮತ್ತೊಂದು ವಿವಾದ: ಸಂಗೀತ ನಿರ್ದೇಶಕರ ವಿರುದ್ಧ ಬಿಜೆಪಿ ಶಾಸಕ ಕಿಡಿ;

'ಪುಷ್ಪ' ಮತ್ತೊಂದು ವಿವಾದ: ಸಂಗೀತ ನಿರ್ದೇಶಕರ ವಿರುದ್ಧ ಬಿಜೆಪಿ ಶಾಸಕ ಕಿಡಿ

ಹೈದರಾಬಾದ್​: ಖ್ಯಾತ ನಟ ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಚಿತ್ರ ಹಲವು ವಿವಾದಾತ್ಮಕ ವಿಚಾರಗಳಿಗಾಗಿ ಭಾರಿ ಸುದಿಯಾಗುತ್ತಿದ್ದು, ಚಿತ್ರಕ್ಕೆ ಸಂಗೀತ ನೀಡಿರುವ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಅವರ ಹೇಳಿಕೆ ವಿವಾದಕ್ಕೆ ಸಿಲುಕಿ ಆಕ್ರೋಶಕ್ಕೆ ಕಾರಣವಾಗಿದೆ.

ದೇವಿಶ್ರೀ ಪ್ರಸಾದ್​, ‘ಐಟಂ ಸಾಂಗ್​ ನನಗೆ ಭಕ್ತಿ ಗೀತೆ ಇದ್ದ ಹಾಗೆ, ಐಟಂ ಸಾಂಗ್​ಗಳು ಒಂದು ರೀತಿಯ ಧ್ಯಾನವೂ ಕೂಡ ಹೌದು’ಎಂದು ಹೇಳಿಕೆ ನೀಡಿದ್ದರು. ಹೇಳಿಕೆ ವಿವಾದಕ್ಕೆ ಗುರಿಯಾಗಿದ್ದು, ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್​ ಹೇಳಿಕೆಯನ್ನು ವಿರೋಧಿಸಿ ಕಿಡಿ ಕಾರಿದ್ದಾರೆ.

ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ದೇವಿ ಶ್ರೀ ಪ್ರಸಾದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೋಶಮಹಲ್ ಶಾಸಕ ರಾಜಾ ಸಿಂಗ್​ ಹೈದರಾಬಾದ್‌ನ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ದೇವಿಶ್ರೀ, ಐಟಂ ಸಾಂಗ್​ಗೆ ಭಕ್ತಿ ಗೀತೆಯನ್ನು ಹೇಗೆ ಹೋಲಿಸುತ್ತಾರೆ? ಅನಗತ್ಯವಾಗಿ ಹಿಂದೂ ಭಕ್ತಿ ಗೀತೆಗಳ ವಿರುದ್ಧ ಅರ್ಥವಿಲ್ಲದ ಹೇಳಿಕೆ ನೀಡಿದ್ದಾರೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಕೂಡಲೇ ಬೇಷರತ್​ ಕ್ಷಮೆಯಾಚಿಸಬೇಕೆಂದಿದ್ದಾರೆ. ಕ್ಷಮೆಯಾಚಿಸದಿದ್ದರೆ, ಹಿಂದೂ ಸಮುದಾಯದಿಂದ ತೀವ್ರ ವಿರೋಧ ಎದುರಿಸಬೇಕಾಗುತ್ತದೆ ಎಂದು ಕಿಡಿ ಕಾರಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

BOLLYWOOD:ಕತ್ರಿನಾ ಕೈಫ್ ಗೆ 3 ಕೋಟಿ ಬೆಲೆಬಾಳುವ ಕಾರು ಗಿಫ್ಟ್ ಕೊಟ್ಟ ಮಾಜಿ ಬಾಯ್ ಫ್ರೆಂಡ್ ಸಲ್ಮಾನ್ ಖಾನ್!

Wed Dec 29 , 2021
ಮುಂಬೈ: ಇತ್ತೀಚಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ , ವಿಕ್ಕಿ ಕೌಶಲ್ ಗೆ ಸೆಲಿಬ್ರಿಟಿ ಫ್ರೆಂಡ್ಸ್ ಗಳಿಂದ ದುಬಾರಿ ಗಿಫ್ಟ್ ಸಿಗುತ್ತಿದೆ. ವಿಕ್ಕಿ ಕೌಶಲ್ ಜೊತೆಗೆ ಕಳೆದ ವಾರ ಮದುವೆಯಾದ ಕತ್ರಿನಾ ಕೈಫ್, ಮಾಜಿ ಬಾಯ್ ಫ್ರೆಂಡ್ ಸಲ್ಮಾನ್ ಖಾನ್ ಅವರಿಂದ ಸುಮಾರು 3 ಕೋಟಿ ರೂ. ಬೆಲೆ ಬಾಳುವ ರೇಂಜ್ ರೋವರ್ ಕಾರನ್ನು ಗಿಫ್ಟ್ ಆಗಿ ಪಡೆದಿರುವುದಾಗಿ ವರದಿಯಾಗಿದೆ. ಮತ್ತೊಂದೆಡೆ ರಣಬೀರ್ ಕಫೂರ್ ಅವರಿಂದ ಸುಮಾರು […]

Advertisement

Wordpress Social Share Plugin powered by Ultimatelysocial