ಸಾಧು ಕೋಕಿಲಾಗೆ ಸೆಲೆಬ್ರಿಟಿಗಳನ್ನು ಕರೆತರುವ ಜವಾಬ್ದಾರಿ ನೀಡಿದ ಕಾಂಗ್ರೆಸ್

ಬೆಂಗಳೂರು: ಜನವರಿ 9ರಿಂದ ಮೇಕೆದಾಟು ಯೋಜನೆಗೆ ಆಗ್ರಹಿಸಿ ಬೃಹತ್ ಪಾದಯಾತ್ರೆಗೆ ಕಾಂಗ್ರೆಸ್ ಕರೆ ನೀಡಿದೆ. ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ಕುರಿತ ಪೂರ್ವಭಾವಿ ಸಭೆ ನಡೆಯಲಿದ್ದು, ಅಂತಿಮ ರೂಪುರೇಷೆ ಸಿದ್ಧವಾಗಲಿದೆ.

ಮೇಕೆದಾಟು ಪಾದಯಾತ್ರೆಗೆ ಈ ಬಾರಿ ಕನ್ನಡ ಚಿತ್ರರಂಗ ನಟ-ನಟಿಯರು ಕೂಡ ಪಾಲ್ಗೊಳ್ಳುವ ನಿರೀಕ್ಷೆ ಇದೆ. ನಟ, ಸಂಗೀತ ಸಂಯೋಜಕ ಸಾಧು ಕೋಕಿಲಾ ಅವರಿಗೆ ಪಾದಯಾತ್ರೆಗೆ ಸೆಲೆಬ್ರಿಟಿಗಳನ್ನು ಕರೆತರುವ ಜವಾಬ್ದಾರಿಯನ್ನು ಕಾಂಗ್ರೆಸ್ ವಹಿಸಿದೆ.

2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರಾಗಿದ್ದ ಸಾಧು ಕೋಕಿಲಾ ಅವರಿಗೆ ಈ ಬಾರಿ ಮಹತ್ವದ ಜವಾಬ್ದಾರಿ ನೀಡಲಾಗಿದ್ದು, ಪಾದಯಾತ್ರೆಗೆ ಇಡೀ ಕನ್ನಡ ಚಿತ್ರರಂಗವೇ ಬೆಂಬಲ ನಿಡುವುದು ಬಹುತೇಕ ಖಚಿತವಾಗಿದೆ.

ಪರಿಷತ್ ಚುನಾವಣೆ ಫಲಿತಾಂಶದ ನಿರೀಕ್ಷೆ ಬೆನ್ನಲ್ಲೇ ಮೇಕೆದಾಟು ಪಾದಯಾತ್ರೆ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದಂತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ರಾಜಧಾನಿ ಬೆಂಗಳೂರಿನಲ್ಲಿ ನಕಲಿ ನೋಟುಗಳ ಹಾವಳಿ: ಕಾಟನ್ ಪೇಟೆಯಲ್ಲಿ ಜೆರಾಕ್ಸ್ ನೋಟ್ ನೀಡಿ ವಂಚನೆ

Sun Dec 26 , 2021
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚಾಗಿದ್ದು, ಜೆರಾಕ್ಸ್ ನೋಟ್ ನೀಡಿ ಯಾಮಾರಿಸಿರುವ ಘಟನೆ ಕಾಟನ್ ಪೇಟೆಯಲ್ಲಿ ನಡೆದಿದೆ. ಕಿಡಿಗೇಡಿಗಳು ಜೆರಾಕ್ಸ್ ಮಾಡಿದ 100 ರೂ. ನೋಟು ಕೊಟ್ಟು ವಂಚನೆ ಮಾಡುತ್ತಿದ್ದಾರೆ. ಇನ್ನೂ ಸಣ್ಣ ಹೋಟೆಲ್, ಬೀಡ ಅಂಗಡಿ, ಜನರಲ್ ಸ್ಟೋರ್ ಹೀಗೆ ಸಣ್ಣ ಪುಟ್ಟ ಅಂಗಡಿಗಳಲ್ಲಿ ಜೆರಾಕ್ಸ್ ನೋಟುಗಳನ್ನ ನೀಡಿದ್ದು, ಹೊರಗಿನಿಂದ ಬಂದು ಲಾಡ್ಜ್​ನಲ್ಲಿ ಉಳಿದುಕೊಂಡವರು ಈ ಕೃತ್ಯ ಎಸಗಿರಬಹುದು ಎಂಬ ಅನುಮಾನವಿದೆ ಎನ್ನಲಾಗಿದೆ. ಇನ್ನೂ ಹೆಚ್ಚು ಜನರಿರುವ […]

Advertisement

Wordpress Social Share Plugin powered by Ultimatelysocial