ಸಮೀರ್‌ ಆಚಾರ್ಯ – ಶ್ರಾವಣಿ ದಂಪತಿಯ ಮುದ್ದಾದ ಮಗಳು ಸರ್ವಾರ್ಥಾ

‘ಬಿಗ್ ಬಾಸ್’ ಹಾಗೂ ‘ರಾಜಾ ರಾಣಿ’ ರಿಯಾಲಿಟಿ ಶೋ ಖ್ಯಾತಿಯ ಸಮೀರ್ ಆಚಾರ್ಯ ಹಾಗೂ ಶ್ರಾವಣಿ ದಂಪತಿ ಇದೀಗ ಹೆಣ್ಣು ಮಗುವಿಗೆ ತಂದೆ, ತಾಯಿ ಆಗಿದ್ದಾರೆ. ಕೆಲವೇ ದಿನಗಳ ಹಿಂದೆಯಷ್ಟೇ ಸಮೀರ್ ಆಚಾರ್ಯ ಹಾಗೂ ಶ್ರಾವಣಿ ದಂಪತಿ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದರು. ಇದೀಗ ಕಲರ್ಸ್ ಕನ್ನಡ ವಾಹಿನಿಯ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ವೇದಿಕೆ ಮೇಲೆ ತಮ್ಮ ಮುದ್ದಾದ ಹೆಣ್ಣು ಮಗುವಿಗೆ ಸಮೀರ್ ಆಚಾರ್ಯ ಹಾಗೂ ಶ್ರಾವಣಿ ದಂಪತಿ ನಾಮಕರಣ ಮಾಡಿದ್ದಾರೆ. ಸೃಜನ್ ಲೋಕೇಶ್, ಅನು ಪ್ರಭಾಕರ್, ತಾರಾ ಜೊತೆ ಸೇರಿ ಸಮೀರ್ ಆಚಾರ್ಯ ಹಾಗೂ ಶ್ರಾವಣಿ ದಂಪತಿ ತಮ್ಮ ಮಗಳಿಗೆ ‘ಸರ್ವಾರ್ಥಾ’ ಎಂದು ಹೆಸರಿಟ್ಟಿದ್ದಾರೆ. ಅದೇ ಕಾರ್ಯಕ್ರಮದಲ್ಲೇ ತೊಟ್ಟಿಲು ಶಾಸ್ತ್ರವನ್ನ ಸಮೀರ್ ಆಚಾರ್ಯ ಮತ್ತು ಶ್ರಾವಣಿ ದಂಪತಿ ನೆರವೇರಿಸಿದ್ದಾರೆ. ಇದೀಗ ಮಗಳು ಸರ್ವಾರ್ಥಾ ಜೊತೆ ಸಮೀರ್ ಆಚಾರ್ಯ ಹಾಗೂ ಶ್ರಾವಣಿ ದಂಪತಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಈ ಮೂರು ಸೊಪ್ಪು ಸೇವಿಸಿದರೆ ಸಾಕು ನಿಯಂತ್ರಣಕ್ಕೆ ಬರುತ್ತದೆ ಡಯಾಬಿಟೀಸ್.

Fri Jan 13 , 2023
      ಮಧುಮೇಹವು ಒಬ್ಬ ವ್ಯಕ್ತಿಯನ್ನು ಒಳಗಿನಿಂದಲೇ ಕುಗ್ಗಿಸಿಬಿಡುತ್ತದೆ. ಮಧುಮೇಹವಿದ್ದಾಗ ನಿಶ್ಯಕ್ತಿ ಬಹಳವಾಗಿ ಕಾಡುತ್ತದೆ. ಪದೇ ಪದೇ ಬಾಯಾರುವುದು, ಪದೇ ಪದೇ ಮೂತ್ರ ವಿಸರ್ಜನೆಗೆ ಹೋಗಬೇಕು ಅನ್ನಿಸುವುದು, ಸ್ವಲ್ಪ ಕೆಲಸ ಮಾಡಿದರೂ ಅತಿಯಾಗಿ ಸುಸ್ತಾಗುವುದು ಹೀಗೆ ನಮ್ಮ ಜೀವನವನ್ನೇ ಬದಲಾಯಿಸಿ ಬಿಡುತ್ತದೆ. ಆದರೂ ಆಹಾರ ಮತ್ತು ಜೀವನಶೈಲಿಯ ಬಗ್ಗೆ ಸ್ವಲ್ಪ ಕಾಳಜಿ ವಹಿಸಿದರೂ ಸಾಕು ಮಧುಮೇಹವನ್ನು ನಿಯಂತ್ರಿಸಬಹುದು. ಮಧುಮೇಹಿಗಳು ಯಾವಾಗಲೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇದು […]

Advertisement

Wordpress Social Share Plugin powered by Ultimatelysocial