ಸಂಕ್ರಾಂತಿಗೆ ಸೆಟ್ಟೇರಲಿದೆ ‘ಸನ್ನಿದಾನ ಪಿ.ಒ’ ಚಿತ್ರ

‘ತೂತು ಮಡಿಕೆ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಗುರುತಿಸಿಕೊಂಡಿರುವ ನಿರ್ಮಾಪಕ ಮಧುಸುಧನ್ ರಾವ್ ಬಿಗ್ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಚಿತ್ರಕ್ಕೆ ‘ಸನ್ನಿದಾನ ಪಿ.ಒ’ ಎಂದು ಶೀರ್ಷಿಕೆ ಇಡಲಾಗಿದ್ದು ಜನವರಿ 14 ಸಂಕ್ರಾಂತಿಯಂದು ಸಿನಿಮಾ ಶಬರಿ ಮಲೆಯ ಸನ್ನಿದಾನದಲ್ಲಿ ಸೆಟ್ಟೇರಲಿದೆ ‘ಸನ್ನಿದಾನ ಪಿ.ಒ’ ಚಿತ್ರ ಡಿವೈನ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡಿದ್ದು, ಮಲಯಾಳಂ ನಿರ್ದೇಶಕ ರಾಜೀವ್ ವೈದ್ಯ ಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಜನವರಿ 14ರಂದು ಸಿನಿಮಾ ಸೆಟ್ಟೇರಲಿದೆ. ತಮಿಳಿನ ಖ್ಯಾತ ನಟ ಯೋಗಿ ಬಾಬು, ಸ್ಯಾಂಡಲ್ ವುಡ್ ಪ್ರತಿಭಾವಂತ ಕಲಾವಿದ ಪ್ರಮೋದ್ ಶೆಟ್ಟಿ ಚಿತ್ರದ ತಾರಾಬಳಗದಲ್ಲಿದ್ದಾರೆ. ಸೌತ್ ಸಿನಿ ದುನಿಯಾದ ಸ್ಟಾರ್ ನಟ ಹಾಗೂ ನಟಿ ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದು, ಸದ್ಯದಲ್ಲೇ ಚಿತ್ರದ ತಾರಾ ಬಳಗ, ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ಹಂಚಿಕೊಳ್ಳೋದಾಗಿ ನಿರ್ಮಾಪಕ ಮಧುಸುಧನ್ ಮಾಹಿತಿ ಹಂಚಿಕೊಂಡಿದ್ದಾರೆ.ಸರ್ವತ ಸಿನಿ ಗ್ಯಾರೇಜ್, ಶಿಮೊಗ್ಗ ಕ್ರಿಯೇಷನ್ಸ್ ಬ್ಯಾನರ್ ಜೊತೆಗೂಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಮಧುಸುಧನ್ ರಾವ್ ಹಾಗೂ ಶಬೀರ್ ಪಠಾನ್ ಈ ಬಿಗ್ ಬಜೆಟ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ವಿನೋಧ್ ಭಾರತಿ ಛಾಯಾಗ್ರಹಣ ಚಿತ್ರಕ್ಕಿದೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಇನ್ನಷ್ಟು ಮಾಹಿತಿ ಹಂಚಿಕೊಳ್ಳಲಿದೆ ಚಿತ್ರತಂಡ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿನಿ ಪ್ರೇಕ್ಷಕರ ಮನಗೆದ್ದ ‘ಥಗ್ಸ್ ಆಫ್ ರಾಮಘಡ’ ಸಿನಿಮಾ

Thu Jan 12 , 2023
ಕಳೆದ ವಾರ ಬಿಡುಗಡೆಯಾದ ಕಾರ್ತಿಕ್ ಮಾರಲಭಾವಿ ನಿರ್ದೇಶನದಲ್ಲಿ ಮೂಡಿ ಬಂದ ‘ಥಗ್ಸ್ ಆಫ್ ರಾಮಘಡ’ ಸಿನಿಮಾ ಪ್ರೇಕ್ಷಕ ಮಹಾ ಪ್ರಭುಗಳ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದು, ಬಿಡುಗಡೆಯಾದ ಎಲ್ಲಾ ಕಡೆಗಳಲ್ಲೂ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಚಿತ್ರದ ಬಗ್ಗೆ ಕೇಳಿ ಬರ್ತಿರುವ ಉತ್ತಮ ವಿಮರ್ಶೆ ಹಾಗೂ ಪ್ರತಿಕ್ರಿಯೆ ಕಂಡು ಚಿತ್ರತಂಡ ಕೂಡ ಖುಷಿಯಾಗಿದೆ.ಟ್ರೇಲರ್ ಹಾಗೂ ಹಾಡುಗಳ ಮೂಲಕ ಭರವಸೆ ಮೂಡಿಸಿದ್ದ ‘ಥಗ್ಸ್ ಆಫ್ […]

Advertisement

Wordpress Social Share Plugin powered by Ultimatelysocial