ಸಂಪುಟ ವಿಸ್ತರಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ಹಾಲಪ್ಪ ಆಚಾರ್

 

ರಾಮನಗರ: ಸಂಪುಟ ವಿಸ್ತರಣೆಯು ರಾಷ್ಟ್ರೀಯ ನಾಯಕರಿಗೆ ಬಿಟ್ಟ ವಿಚಾರ. ಅವರ ಆದೇಶದಂತೆ ನಾವು ನಡೆಯುತ್ತೇವೆ ಎಂದು ಗಣಿ, ಭೂ ವಿಜ್ಞಾನ ಹಾಗೂ‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಹೇಳಿದರು.ಬಿಡದಿಯ ತಮ್ಮಣ್ಣನದೊಡ್ಡಿ ಅಂಗನವಾಡಿಯಲ್ಲಿ ಸ್ಮಾರ್ಟ್ ಕ್ಲಾಸ್ ಯೋಜನೆಗೆ ಚಾಲನೆ ನೀಡಿದ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರುಆನಂದ ಸಿಂಗ್ ಮತ್ತು ಡಿ.ಕೆ. ಶಿವಕುಮಾರ್ ಭೇಟಿ ಬಗ್ಗೆ ನನಗೆ ತಿಳಿದಿಲ್ಲ‌. ಅಧಿಕಾರ ಇಲ್ಲದವರು ಸುಳ್ಳು ಸುದ್ದಿ ಹಬ್ಬಿಸುತ್ತಲೇ ಇರುತ್ತಾರೆ ಎಂದರು.ಅಂಗನವಾಡಿಗಳಲ್ಲಿ ಎಲ್‌ಕೆಜಿ- ಯುಕೆಜಿ ಆರಂಭ ವಿಚಾರ ಸರ್ಕಾರದ ಹಂತದಲ್ಲಿ ಇದೆ. ರಾಷ್ಟ್ರೀಯ ಶಿಕ್ಷಣ ನೀತಿ ಅಡಿ ಯಾವ ಆದೇಶ ಬರುತ್ತದೆಯೋ ಅದರಂತೆ ನಡೆಯುತ್ತೇವೆ. ಅಂಗನವಾಡಿಗಳಲ್ಲೇ ಆರಂಭಿಸುವಂತೆ ಸೂಚನೆ ನೀಡಿದರೆ ಅದಕ್ಕೆ ಸಿದ್ಧತೆ‌ ಮಾಡಿಕೊಳ್ಳುತ್ತೇವೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಿಲಿಂಬಿ: ಯದ್ವಾತದ್ವ ಚಲಿಸಿದ ಕಾರು; ದ್ವಿಚಕ್ರ ವಾಹನಕ್ಕೆ ಢಿಕ್ಕಿ

Fri Feb 4 , 2022
ಮಂಗಳೂರು, ಫೆ.4: ಚಾಲಕನ‌ ನಿಯಂತ್ರಣ ತಪ್ಪಿದ ಕಾರೊಂದು ಯದ್ವಾತದ್ವ ಚಲಿಸಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ ಘಟನೆ ಗುರುವಾರ ನಡೆದಿದೆ.ನಗರದ ಚಿಲಿಂಬಿ ಬಳಿಯ ಕೋಟೆಕಣಿ ರಸ್ತೆ ಮತ್ತು ಕುಳೂರು ಫೆರ್ರಿ ರಸ್ತೆಯಲ್ಲಿ ಸಂಜೆಯ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.ಕಾರಿನ ಚಾಲಕ ಕೋಟೆಕಣಿಯಿಂದ ಇಳಿಜಾರಿನ ರಸ್ತೆಯಲ್ಲಿ ತೆರಳುತ್ತಿರುವ ವೇಳೆ ಲೇಡಿಹಿಲ್‌ನಿಂದ ಉರ್ವಾ ಸ್ಟೋರ್ಸ್ ಕಡೆಗೆ ಹೋಗುತ್ತಿದ್ದ ಹೋಂಡಾ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ, ಆಕ್ಟಿವಾದಲ್ಲಿದ್ದ ಇಬ್ಬರು ಸವಾರರು […]

Advertisement

Wordpress Social Share Plugin powered by Ultimatelysocial