ಸ್ಯಾಂಡಲ್ ವುಡ್‌ಗೆ ಗಾಯಕಿ ಮಂಗ್ಲಿ ಎಂಟ್ರಿ

ಬಹುಭಾಷೆ ಸಿನಿಮಾಗಳಲ್ಲಿ ಇಷ್ಟು ದಿನ ತಮ್ಮ ಧ್ವನಿಯಿಂದ ಚಿರಪರಿಚಿತರಾಗಿದ್ದ ಗಾಯಕಿ ಮಂಗ್ಲಿ ಇದೀಗ ನಾಯಕಿಯಾಗಿ ಬಡ್ತಿ ಪಡೆಯುತ್ತಿದ್ದಾರೆ.
ಹೌದು ಗಾಯಕಿ ಮಂಗ್ಲಿ ಚಂದನವನದಲ್ಲಿ ನಾಯಕಿಯಾಗಿ ಪಾದರ್ಪಣೆ ಮಾಡುತ್ತಿರುವುದು ವಿಶೇಷ.ತೆಲುಗು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಸೂಪರ್ ಹಿಟ್ ಹಾಡುಗಳನ್ನು ಹೇಳಿರುವ ಮಂಗ್ಲಿ,ನಾಯಕಿಯಾಗಿ ಬಣ್ಣ ಹಚ್ಚಲು ಸಿದ್ದರಾಗಿದ್ದಾರೆ. ಗಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಈ ಗಾಯಕಿ, ಮೊದಲ ಬಾರಿಗೆ ನಾಯಕಿಯಾಗಿ ಪ್ರವೇಶ ಮಾಡುತ್ತಿದ್ದಾರೆ. ಪತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ ನಿರ್ದೇಶನದಲ್ಲಿ ಮೂಡಿ ಬರಲಿರುವ ಪಾದರಾಯ ಚಿತ್ರಕ್ಕೆ ಇವರು ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಸದ್ಯ ವೇದ ಸಿನಿಮಾದ ‘ಗಿಲ್ಲಕ್ಕೋ’ ಹಾಡಿನ ಮೂಲಕ ಮನೆಮಾತಾಗಿರುವ ಮಂಗ್ಲಿ, ತ್ರಿಬಲ್ ರೈಡಿಂಗ್, ವಿಕ್ರಾಂತ್ ರೋಣ, ದಿಪ್ ಪಸಂದ್, ರಾಬರ್ಟ್ ಸೇರಿದಂತೆ ಹಲವಾರು ಕನ್ನಡ ಸಿನಿಮಾಗಳ ಹಾಡಿಗೆ ದನಿಯಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ನಾಯಕಿಯಾಗಿ ನಟಿಸುತ್ತಿದ್ದು, ನಾಗಶೇಖರ್ ಈ ಸಿನಿಮಾದ ನಾಯಕ.
ಇದೊಂದು ನೈಜ ಘಟನೆಯನ್ನು ಆಧರಿಸಿದ ಸಿನಿಮಾವಾಗಿದ್ದು, ೨೦೧೩-೧೪ರಲ್ಲಿ ನಡೆದ ಘಟನೆಯನ್ನು ನಿರ್ದೇಶಕ ಚಕ್ರವರ್ತಿ ಚಂದ್ರಚೂಡ ಚಿತ್ರ ತಯಾರಿ ಮಾಡಲು ಮುಂದಾಗಿದ್ದಾರೆ. ಈ ಘಟನೆಯು ಆರು ರಾಜ್ಯಗಳಿಗೆ ಸಂಬಂಧಿಸಿದ್ದಾಗಿದ್ದು, ಅದನ್ನು ಹೊಸ ರೀತಿಯಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ. ಚಿತ್ರಕಥೆ, ಸಂಭಾಷಣೆ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿರುವ ಅವರು, ಈ ಚಿತ್ರಕ್ಕೆ ಪಾದರಾಯ ಎಂದು ಹೆಸರಿಡುವುದಕ್ಕೂ ಕಾರಣವಿದೆಯಂತೆ ಎಂದು ಕುತುಹಲ ಮೂಡಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಲೆ ಏರಿಕೆ ನಡುವೆ ಸಂಕ್ರಾಂತಿಗೆ ಭರಾಟೆ ಖರೀದಿ.

Sat Jan 14 , 2023
ಸತತ ಎರಡು ವರ್ಷಗಳ ಕೊರೊನಾ ಬಳಿಕ ಈ ವರ್ಷ ಮಕರ ಸಂಕ್ರಾಂತಿ ಕಳೆಕಟ್ಟಿದೆ. ದರ ಏರಿಕೆ ಮಧ್ಯೆಯೇ ಜನರು ಸಂಕ್ರಾಂತಿಯನ್ನು ಸಂಭ್ರಮ ಸಡಗರದಿಂದ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಹಿಂದೂಗಳ ಪವಿತ್ರ ಹಬ್ಬ ಮಕರ ಸಂಕ್ರಾಂತಿ. ಸೂರ್ಯನು ತನ್ನ ಪಥವನ್ನು ಬದಲಿಸುವ ಈ ದಿನವನ್ನು ದೇಶದಾದ್ಯಂತ ವಿವಿಧ ಹೆಸರು , ಆಚರಣೆ, ಸಂಪ್ರದಾಯಗಳಲ್ಲಿ ಆಚರಿಸಲಾಗುತ್ತದೆ. ಊರಿನ ಪ್ರತಿ ಬೀದಿಯಲ್ಲೂ ಸಂಭ್ರಮ ಮನೆ ಮಾಡಿರುತ್ತದೆ. ಎಳ್ಳು-ಬೆಲ್ಲ ಬೀರುವುದುದೇನೂ, ಎತ್ತುಗಳನ್ನು ಕಿಚ್ಚಿನ ಮಧ್ಯೆ ಹಾಯಿಸುವುದೇನೂ, […]

Advertisement

Wordpress Social Share Plugin powered by Ultimatelysocial