ಸಾಂಡಲ್ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದ್ದಾರೆ.

ಸಾಂಡಲ್ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದ್ದಾರೆ. ತಮಿಳಿನ ಸೂಪರ್ಸ್ಟಾರ್ ದಳಪತಿ ವಿಜಯ್ ಅವರ ಮುಂದಿನ 67ನೇ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಸಾಂಡಲ್ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದ್ದಾರೆ.
ತಮಿಳಿನ ಸೂಪರ್ಸ್ಟಾರ್ ದಳಪತಿ ವಿಜಯ್ ಅವರ ಮುಂದಿನ 67ನೇ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಕಳೆದ ವರ್ಷದ ಅವರ ‘ಚಾರ್ಲಿ 777’ ದೇಶಾದ್ಯಂತ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಂಡಿತು. ಬಾಕ್ಸ್ ಆಫೀಸ್ನಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿ ಸೂಪರ್ ಹಿಟ್ ಪಟ್ಟಿಗೆ ಸೇರಿತು. ಈ ಸಿನಿಮಾ ಹಿಟ್ ಆಗಿದ್ದೇ ತಡ, ಮುಂದಿನ ಪ್ರಾಜೆಕ್ಟ್ಗಳ ಮೇಲೆ ಹೆಚ್ಚು ಗಮನಹರಿಸಿರುವ ರಕ್ಷಿತ್, ಹಲವು ಸಿನಿಮಾಗಳಲ್ಲಿ ನಟಿಸುವುದರ ಜತೆಗೆ ನಿರ್ದೇಶನದ ಕೆಲಸಗಳಲ್ಲಿಯೂ ಬಿಜಿಯಾಗಿದ್ದಾರೆ.

ಅಚ್ಚರಿಯ ವಿಚಾರ ಏನೆಂದರೆ, ಕನ್ನಡದ ಜತೆಗೆ ಪರಭಾಷೆಯ ಸಿನಿಮಾ ಆಫರ್ಗಳೂ ಅವರನ್ನು ಅರಸಿ ಬರುತ್ತಿವೆ. ತಮಿಳಿನ ಸೂಪರ್ಸ್ಟಾರ್ ದಳಪತಿ ವಿಜಯ್ ಅವರ ಮುಂದಿನ 67ನೇ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಕಾಲಿವುಡ್ ಅಂಗಳದಲ್ಲಿ ಈ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ರಕ್ಷಿತ್ ಶೆಟ್ಟಿ ಜತೆಗೆ ಈಗಾಗಲೇ ಚಿತ್ರತಂಡ ಮಾತುಕತೆ ನಡೆಸಿದೆಯಂತೆ. ಲೋಕೇಶ್ ಕನಕರಾಜ್ ತಮಿಳಿನ ಸ್ಟಾರ್ ಡೈರೆಕ್ಟರ್.

ಈಗಾಗಲೇ ‘ಖೈದಿ’, ‘ಮಾಸ್ಟರ್’, ‘ವಿಕ್ರಮ್’ ಸಿನಿಮಾಗಳ ಮೂಲಕ ತಮ್ಮ ಛಾಪು ಮೂಡಿಸಿದ್ದಾರೆ. ಈಗ ಇದೇ ನಿರ್ದೇಶಕ ಮತ್ತೆ ವಿಜಯ್ ಜತೆ ಕೈ ಜೋಡಿಸಿದ್ದು, ಬೇರೆ ಬೇರೆ ಇಂಡಸ್ಟ್ರಿಯ ಕಲಾವಿದರೂ ಈ ಸಿನಿಮಾದಲ್ಲಿ ಇರಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ರಕ್ಷಿತ್ ಶೆಟ್ಟಿ, ಆ ತರಹದ ಯಾವುದೇ ಪ್ರಾಜೆಕ್ಟ್ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಕುರುಡು ಕಾಂಚಾಣ' ಮೂಲಕ ನಾಯಕಿಯಾಗಿ ಅಮೂಲ್ಯ ಗೌಡ ಪಾದಾರ್ಪಣೆ.

Wed Jan 18 , 2023
ಅಪರಂಜಿ, ಅಗ್ನಿಸಾಕ್ಷಿ ಮತ್ತು ನನ್ನರಸಿ ರಾಧೆ ಧಾರಾವಾಹಿಗಳ ಮೂಲಕ ಮನೆ ಮಾತಾಗಿದ್ದ ಮಾಡೆಲ್ ಕಮ್ ನಟಿ ಅಮೂಲ್ಯಗೌಡ ಕುರುಡು ಕಾಂಚಾಣ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಅಪರಂಜಿ, ಅಗ್ನಿಸಾಕ್ಷಿ ಮತ್ತು ನನ್ನರಸಿ ರಾಧೆ ಧಾರಾವಾಹಿಗಳ ಮೂಲಕ ಮನೆ ಮಾತಾಗಿದ್ದ ಮಾಡೆಲ್ ಕಮ್ ನಟಿ ಅಮೂಲ್ಯಗೌಡ ಕುರುಡು ಕಾಂಚಾಣ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಎಸ್ ಪ್ರದೀಪ್ ವರ್ಮಾ ನಿರ್ದೇಶನದ ಈ ಚಿತ್ರದಲ್ಲಿ […]

Advertisement

Wordpress Social Share Plugin powered by Ultimatelysocial