ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಕೊಡ್ತಿದ್ದಂತೆ ಫುಲ್ ಖುಷ್ ಆದ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ!

ಬೆಂಗಳೂರು: ಸಂಸದೆ ಸುಮಲತಾ ಅಂಬರೀಷ್ ಇಂದು ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸಿ, ಸಹ ಸದಸ್ಯತ್ವ ಪಡೆಯುವ ಘೋಷಣೆಯನ್ನ ಮಂಡ್ಯದಲ್ಲಿ ಮಾಡಿದರು. ಈ ಘೋಷಣೆ ಬೆನ್ನಲೇ ಮಂಡ್ಯ ರಾಜಕೀಯದಲ್ಲಿ ಹಲವಾರು ಲೆಕ್ಕಾಚಾರ ಮುನ್ನಲೆಗೆ ಬರುತ್ತಿದೆ. ಈ ಪೈಕಿ ಮುಖ್ಯವಾಗಿ ಹಿನ್ನಲೆಗೆ ಸರಿದಿದ್ದ ಮಾಜಿ ಸಂಸದೆ ರಮ್ಯಾ (ದಿವ್ಯಾ ಸ್ಪಂದನ ) ರಾಜಕೀಯ ಪಯಣ ಮತ್ತೆ ಮುಖ್ಯ ರಸ್ತೆಗೆ ಬರುವ ಸಾಧ್ಯತೆ ಹೆಚ್ಚಿದೆ.

ಕೆಲ ವರ್ಷಗಳಿಂದ ರಾಜಕೀಯ ಹಾಗೂ ಚಿತ್ರರಂಗದಿಂದ ದೂರ ಉಳಿದಿದ್ದ ಮಾಜಿ ಸಂಸದೆ ಹಾಗೂ ಚಿತ್ರನಟಿ ರಮ್ಯಾಮತ್ತೆ ಚಂದನವನಕ್ಕೆ ಕಂಬ್ಯಾಕ್ ಮಾಡಿರುವ ಜೊತೆಗೆ ಈಗ ರಾಜಕೀಯಕ್ಕೂ ಮತ್ತೆ ಮರುಪ್ರವೇಶ ಮಾಡಲು ನಿರ್ಧಾರ ಮಾಡಿದ್ದಾರೆ.

ಮಂಡ್ಯ ಕ್ಷೇತ್ರದಿಂದ ರಾಜಕೀಯ ಪ್ರವೇಶ ಮಾಡಿದ್ದ ರಮ್ಯಾ ಕೆಲ ತಿಂಗಳಿಂದ ಸುಮಲತಾ ಅಂಬರೀಷ್ ಮುಂದಿನ ನಡೆಗೆ ಕಾದಿದ್ದರು. ಯಾಕೆ ಅಂತೀರಾ? ಉತ್ತರ ಇಲ್ಲಿದೆ…

ಪಕ್ಷೇತರ ಅಭ್ಯರ್ಥಿಯಾಗಿ 2018ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಷ್ ಅವರು ಸಂಸದೆಯಾಗಿ ಆಯ್ಕೆಯಾಗಿದ್ದರು. ಆದರೆ ಮುಂದಿನ ರಾಜಕೀಯ ನಡೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ಸೇರ್ಪಡೆ ಹಾದಿಗಳು ಇದ್ದವು. ಇದೀಗ ಸುಮಲತಾ ಅಂಬರೀಷ್ ಬಿಜೆಪಿ ಕಡೆ ತಿರುಗಿದ್ದಾರೆ. ಇದರಿಂದ ರಮ್ಯಾ ಮತ್ತೆ ರಾಜಕೀಯಕ್ಕೆ ಕಂಬ್ಯಾಕ್ ಮಾಡಲು ಹಾದಿ ಸುಗಮ ಆಗಿದೆ.

ಸದ್ಯಕ್ಕೆ ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಂಸದೆ ರಮ್ಯ, ಸುಮಲತಾ ಕಾಂಗ್ರೆಸ್ ಸೇರ್ತಾರಾ? ಇಲ್ಲವೇ ಬಿಜೆಪಿ ಸೇರ್ತಾರಾ? ಎಂಬ ವಿಚಾರದ ಜೋರು ಚರ್ಚೆ ಎದುರಾಗಿತ್ತು. ಹಾಲಿ ಸಂಸದೆಯ ರಾಜಕೀಯ ನಿರ್ಧಾರದಿಂದ ಮಾಜಿ ಸಂಸದೆಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ಸುಮಲತಾ ಕಾಂಗ್ರೆಸ್ ಕಡೆ ಮುಖ ಮಾಡಿದ್ರೆ , ರಮ್ಯಾಗೆ ಮುಂದಿನ ಲೋಕಸಭಾ ಚುನಾವಣೆ ಇಲ್ಲವೇ ಮುಂಬರಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದಲ್ಲಿ ಹಿನ್ನಡೆ ಎಂಬ ಅಭಿಪ್ರಾಯ ಸಕ್ಕರೆ ನಗರಿ ಮಂಡ್ಯದಲ್ಲಿ ಇತ್ತು. ಸದ್ಯ ಬಿಜೆಪಿಗೆ ಸುಮಲತಾ ಬೆಂಬಲ ಘೋಷಣೆ ಹಿನ್ನೆಲೆಯಲ್ಲಿ, ರಮ್ಯಾಗೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ತಿಕ್ಕಾಟ ಇಲ್ಲದಂತಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹುಲಿ ಬಾಲಕ್ಕೆ ಕೋಲಿನಿಂದ ಹೊಡೆದ ರೈತ!

Sat Mar 11 , 2023
ಅನಗತ್ಯವಾಗಿ ಯಾರನ್ನಾದರೂ ಸುಮ್ಮನೇ ಕೆಣಕುವುದು ಒಳ್ಳೆಯದಲ್ಲ. ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ವರದಿಯಾದ ದುರಂತ ಘಟನೆಯೊಂದರಲ್ಲಿ ಹುಲಿ ಹೇಗೆ ಪ್ರತಿಕ್ರಿಯಿಸುತ್ತದೆ ಎಂದು ತಿಳಿಯಲು ರೈತರೊಬ್ಬರು ಹುಲಿಯ ಬಾಲವನ್ನು ಕೋಲಿನಿಂದ ಹೊಡೆದು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹುಲಿಯು ರೈತನ ಕುತ್ತಿಗೆಯ ಮೇಲೆ ದಾಳಿ ಮಾಡಿದ ಪರಿಣಾಮ ಕುತ್ತಿಗೆಯಲ್ಲಿ ಆಳವಾದ ಗಾಯವಾಯಿತು. ಈ ಮೂಲಕ ರೈತನ ಉತ್ಸಾಹ ದುರಂತದೆಡೆಗೆ ತಿರುಗಿತು. ಸಂತ್ರಸ್ತರನ್ನ 35 ವರ್ಷದ ಸಂತೋಷ್ ಎಂದು ಗುರುತಿಸಲಾಗಿದ್ದು ಚಿಕಿತ್ಸೆ ಫಲಿಸದೇ ಅವರು ಆಸ್ಪತ್ರೆಯಲ್ಲಿ […]

Advertisement

Wordpress Social Share Plugin powered by Ultimatelysocial