ಸ್ಯಾಂಡಲ್’ವುಡ್ ಬೆಡಗಿ ದಾವಣಗೆರೆ ಮೂಲದ ಅದಿತಿ ಪ್ರಭುದೇವ ಕೊಡಗಿನ ಸೊಸೆಯಾಗುತ್ತಿದ್ದಾರೆ.

ಇತ್ತೀಚೆಗಷ್ಟೇ ಎರಡೂ ಕುಟುಂಬಗಳು ತಾಂಬೂಲ ಬದಲಾಯಿಸಿಕೊಂಡಿದ್ದು, ವಿವಾಹದ ನಿಶ್ಚಿತಾರ್ಥವಾಗಿದೆ.ಸೋಮವಾರಪೇಟೆಯ ಕಾಫಿ ಬೆಳೆಗಾರ ಪಿ.ಡಿ.ಚಂದ್ರಕಾಂತ್ ಹಾಗೂ ಸುಚರಿತಾ ದಂಪತಿಯ ಪುತ್ರ ಯಶಸ್ವಿಯನ್ನು ಅದಿತಿ ವರಿಸಲಿದ್ದಾರೆ. ಯಶಸ್ವಿ ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದು, ಕೃಷಿ ಕ್ಷೇತ್ರದ ಕಡೆಗೂ ಒಲವು ಹೊಂದಿದ್ದಾರೆ. ಗ್ರಾಮೀಣ ಭಾಗದ ಸೊಗಡಿನ ಬಗ್ಗೆ ಅತೀವ ಅಭಿಮಾನ ಹೊಂದಿರುವ ಮತ್ತು ಕೃಷಿಕ ಕುಟುಂಬದ ಬಗ್ಗೆ ಆಸಕ್ತಿಯಿದ್ದ ಅದಿತಿ ತಮ್ಮ ನಿರೀಕ್ಷೆಯ ಹುಡುಗನೊಂದಿಗೆ ದಾಂಪತ್ಯ ಜೀವನಕ್ಕೆ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ.
ಈಗಾಗಲೇ ನಿಶ್ಚಿತಾರ್ಥದ ಫೋಟೋಗಳು ವೈರಲ್ ಆಗಿದ್ದು, ಅದಿತಿ ಹಾಗೂ ಯಶಸ್ವಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ.
ಅದಿತಿ ಸೋಮವಾರಪೇಟೆಯ ಸೊಸೆಯಾಗುತ್ತಿರುವ ಬಗ್ಗೆ ಇಲ್ಲಿನ ಸಿನಿ ಅಭಿಮಾನಿಗಳು ಹರ್ಷಗೊಂಡಿದ್ದಾರೆ.
ಮೊದಲಿಗೆ ನಿರೂಪಕಿಯಾಗಿ ತೆರೆ ಮೇಲೆ ಕಾಣಿಸಿಕೊಂಡ ಅದಿತಿ ಬಳಿಕ ‘ಗುಂಡ್ಯಾನ್ ಹೆಂಡ್ತಿ’ ಧಾರವಾಹಿಯ ಮೂಲಕ ಕಿರುತೆರೆ ಪ್ರವೇಶಿಸಿದ್ದರು. 2017 ರಲ್ಲಿ ನಟ ಅಜಯ್ ರಾವ್ ಜೊತೆ ‘ಧೈರ್ಯಂ’ ಚಿತ್ರದಲ್ಲಿ ನಟಿಸುವ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದ್ದರು. ಸದ್ಯ ಅನೇಕ ಸಿನಿಮಾ ಆಫರ್ ಗಳನ್ನು ಕೈಯಲ್ಲಿಟ್ಟುಕೊಂಡು ಕನ್ನಡ ಚಿತ್ರರಂಗದ ಬ್ಯೂಸಿ ನಟಿಯಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ʼಟೊಮೆಟೊʼ ಸೇವಿಸುವುದರಿಂದ ಇದೆ ಇಷ್ಟೆಲ್ಲಾ ಲಾಭ

Tue Dec 28 , 2021
ಟೊಮೆಟೊ ಹಣ್ಣು ಹಾಗು ತರಕಾರಿಯಾಗಿ ಬಳಕೆಯಾಗುವ ಏಕೈಕ ಪ್ರಬೇಧ. ಹಾಗಾಗಿ ಇದರಲ್ಲಿ ಹಣ್ಣಿನ ಹಾಗೂ ತರಕಾರಿಯ ಪೌಷ್ಟಿಕಾಂಶಗಳು ಹೇರಳವಾಗಿವೆ. ದಿನನಿತ್ಯ ಇದನ್ನು ಅಡುಗೆಯಲ್ಲಿ ಬಳಸುವುದರಿಂದ ಸಾಕಷ್ಟು ಪ್ರಮಾಣದ ವಿಟಮಿನ್ ಅನ್ನು ಪಡೆಯಬಹುದು. ಟೊಮೆಟೊ ಹಣ್ಣಿನಲ್ಲಿರುವ ಕೆಲವು ಅಂಶಗಳು ಹೃದಯಾಘಾತವನ್ನು ತಡೆಯುವ ಗುಣವನ್ನು ಹೊಂದಿದೆ. ದಿನನಿತ್ಯ ಇದನ್ನು ಸೇವಿಸುವುದರಿಂದ ಕ್ಯಾನ್ಸರ್ ನಂತಹ ಮಹಾಮಾರಿಯನ್ನು ತಡೆಗಟ್ಟಬಹುದು ಎಂಬುದನ್ನು ಕೆಲವು ಸಂಶೋಧನೆಗಳು ದೃಢಪಡಿಸಿವೆ. ನಿತ್ಯದ ಊಟದಲ್ಲಿ ಟೊಮೆಟೊ ಸೂಪ್ ಸೇವಿಸುವುದರಿಂದ ಜೀರ್ಣಕ್ರಿಯೆ ಹೆಚ್ಚುತ್ತದೆ ಅಲ್ಲದೆ […]

Advertisement

Wordpress Social Share Plugin powered by Ultimatelysocial