ಚಿತ್ರದುರ್ಗ: ಜಿಲ್ಲೆಯ ಮಾಳಪ್ಪನಹಟ್ಟಿ ಗ್ರಾಮದಲ್ಲಿ ಬೆಳಗ್ಗೆ ಆಗುವುದರೊಳಗೆ ಸಂಗೊಳ್ಳಿ ರಾಯಣ್ಣನ ಕಂಚಿನ ಪ್ರತಿಮೆ ಸ್ಥಾಪಿಸಿದ್ದಾರೆ. ಈ ನಡುವೆ ಹೆದ್ದಾರಿ ಮದ್ಯೆ ಪ್ರತಿಮೆ ಸ್ಥಾಪಿಸಿ ಯುವಕರು ಘೋಷಣೆ ಕೂಗಿದ್ದಾರೆ.
ಈ ಗ್ರಾಮದಲ್ಲಿ ಬಹುತೇಕ ಮಂದಿ ಸಂಗೊಳ್ಳಿ ರಾಯಣ್ಣನ ಅನುಯಾಯಿಗಳೇ ಆಗಿದ್ದಾರೆ.
ಅದಲ್ಲದೇ ಯುವಕರು ಸಂಗೊಳ್ಳಿ ರಾಯಣ್ಣ ಟ್ರಸ್ಟ್ ಕೂಡ ಮಾಡಿಕೊಂಡಿದ್ದಾರೆ. ಹೀಗಾಗಿ ಗ್ರಾಮಕ್ಕೆ ಪ್ರವೇಶಿಸುವ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸಬೇಕೆಂಬುದು ಬಹು ದಿನದ ಕನಸಾಗಿತ್ತು. ಆ ಕನಸಿನಂತೆ ಗ್ರಾಮದ ಜನರೆಲ್ಲಾ ಸೇರಿ ಸುಮಾರು ಎಂಟೂವರೆ ಲಕ್ಷ ರೂ. ಖರ್ಚು ಮಾಡಿ 850 ಕೆಜಿ ತೂಕದ ಎಂಟೂ ಕಾಲು ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ.
ಚನ್ನಯ್ಯ ಒಡೆಯರ್ ವೃತ್ತ ಎಂದೇ ಈ ವೃತ್ತಕ್ಕೆ ಕರೆಯುತ್ತಿದ್ದರು. ಆದ್ರೆ ಹಿಂದಿನಿಂದಲೂ ಸಂಗೊಳ್ಳಿ ರಾಯಣ್ಣನ ಭಾವಚಿತ್ರವಿರಿಸಿ ಪೂಜಿಸಲಾಗುತ್ತಿತ್ತು. ಇಂದು ಬೆಳಗಿನ ಜಾವ ಸಂಗೊಳ್ಳಿ ರಾಯಣ್ಣ ಪುತ್ಥಳಿ ಸ್ಥಾಪಿಸಿದ್ದಾರೆ.ಇನ್ನು ಶಿವರಾತ್ರಿ ದಿನ ಬೆಳ್ಳಂಬೆಳಗ್ಗೆ ಮಾಳಪ್ಪನಹಟ್ಟಿ ಬಳಿಯ ಹೆದ್ದಾರಿ ನಡುವೆ ದೇಶಭಕ್ತ ಸ್ವತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಸ್ಥಾಪನೆ ಮಾಡಿದ್ದಾರೆ. ಆದರೆ ಯಾವುದೇ ಅನುಮತಿ ಪಡೆಯದೇ ಸಂಗೊಳ್ಳಿ ರಾಯಣ್ಣ ಟ್ರಸ್ಟ್ ನ ಯುವಕರು ಪ್ರತಿಮೆ ಸ್ಥಾಪಿಸಿದ್ದಾರೆ. ಹೀಗಾಗಿ ಬೆಳಗ್ಗೆಯಿಂದಲೇ ಆ ಸ್ಥಳಕ್ಕೆ ಸ್ಥಳೀಯರು ಬಂದು ನೋಡಿಕೊಂಡು ಹೋಗುತ್ತಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada