ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಮೂರ್ತಿಯನ್ನು ಭಗ್ನಗೊಳಿಸಿದ ಎಂ.ಇ.ಎಸ್.ಹಾಗೂ ಶಿವಸೇನೆ ಸಂಘಟನೆಗಳನ್ನು ನಿಷೇಧಗೊಳಿಸಿ ಹಾಗೂ ಆರೋಪಗಳನ್ನು ಕೂಡಲೇ ಗಡಿಪಾರು ಮಾಡಬೇಕೆಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದವರು ಟೈಯರಗೆ ಬೆಂಕಿ ಹಚ್ಚಿ ರಸ್ತೆ ತಡೆದು ಪ್ರತಿಭಟನೆ ಮಾಡಿ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿಗೆ ಮನವಿ ಸಲ್ಲಿಸಿದರು.ನಂತರ ಮಾತನಾಡಿದ ಗದಗ ಜಿಲ್ಲಾ ಅಧ್ಯಕ್ಷ ಬಸವರಾಜ ಹಿರೇಮನಿ ಬೆಳಗಾವಿ ಜಿಲ್ಲೆ ಅನಗೋಳ ಗ್ರಾಮದಲ್ಲಿ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿಯನ್ನು ಭಗ್ನಗೊಳಿಸಿದ ಎಂ.ಇ.ಎಸ್.ಕಾರ್ಯಕರ್ತರು ಹಾಗೂ ಶಿವಸೇನೆಯ ಕಾರ್ಯಕರ್ತರು ಕರ್ನಾಟಕ ರಾಜ್ಯಕ್ಕೆ ಮಾಡಿದ ಘೋರ ಅಪಮಾನವಾಗಿದ್ದು ಇದು ಕನ್ನಡಿಗರನ್ನು ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳನ್ನು ಕೆರಳಿಸುವಂತೆ ಮಾಡಿದೆ ಪದೇ ಪದೇ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಅಪಮಾನ ಮಾಡುತ್ತಿರುವ ದುಷ್ಟ ಶಕ್ತಿಗಳನ್ನು ಕೂಡಲೇ ಬಂಧಿಸಿ ಅವರನ್ನು ನಮ್ಮ ರಾಜ್ಯದಿಂದ ಶಾಶ್ವತವಾಗಿ ಗಡಿಪಾರು ಮಾಡಬೇಕು ನೀವು ಒಂದು ರಾಯಣ್ಣನ ಮೂರ್ತಿಯನ್ನು ಭಗ್ನಗೊಳಿಸಿದರೆ ನಾವು ನೂರು ಶಿವಾಜಿ ಮೂರ್ತಿಯನ್ನು ಭಗ್ನಗೊಳಿಸುತ್ತೇವೆಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada