ಬಾಗಲಕೋಟೆ : ಪ್ರವಚನಕಾರ ಇಬ್ರಾಹಿಂ ಸುತಾರ ಅವರ ಅಂತ್ಯಕ್ರಿಯೆ ಮಹಾಲಿಂಗಪುರದ ಅವರ ತೋಟದಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ.ಸುತಾರ ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ ಮಹಾಲಿಂಗಪುರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ.ಮೃತರ ಗೌರವಾರ್ಥವಾಗಿ ಪಟ್ಟಣದ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸುವಂತೆ ಜಲಸಂಪನ್ಮೂಲ ಇಲಾಖೆ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada