ಭಾರತ ಸೇರಿ 16 ರಾಷ್ಟ್ರಗಳಿಗೆ ಸೌದಿ ನಿರ್ಬಂಧ:

ಜೆದ್ದಾ: ಎರಡು ವರ್ಷಗಳ ಬಳಿಕ ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ ಎನ್ನುವಾಗಲೇ ಮತ್ತೊಮ್ಮೆ ವೈರಸ್​ ಭೀತಿ ಎದುರಾಗಿದೆ. ಆದರೆ ಈ ಬಾರಿ ಎಚ್ಚೆತ್ತುಕೊಂಡಿರುವ ಕೆಲ ರಾಷ್ಟ್ರಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿವೆ.

ಈ ನಿಟ್ಟಿನಲ್ಲಿ ಸೌದಿ ಅರೇಬಿಯಾ ಕೂಡ ನಿರ್ಧಾರ ಕೈಗೊಂಡಿದ್ದು, ಕರೊನಾ 4ನೇ ಅಲೆಯನ್ನು ತಡೆಗಟ್ಟುವ ಉದ್ದೇಶದಿಂದ ಸೋಂಕು ಕಂಡುಬರುತ್ತಿರುವ ರಾಷ್ಟ್ರಗಳ ಪ್ರವೇಶಕ್ಕೆ ನಿರ್ಬಂಧ ಹೇರಲು ಮುಂದಾಗಿದೆ.

ಈ ನಿಟ್ಟಿನಲ್ಲಿ ಭಾರತ ಸೇರಿದಂತೆ 16 ರಾಷ್ಟ್ರಗಳಿಗೆ ನಿರ್ಬಂಧ ಹೇರಿದೆ. ಇಲ್ಲಿನ ಜನರು ಸಂಪರ್ಕದಿಂದ ಮತ್ತೆ ಕರೊನಾ ಸೋಂಕು ತಗುಲುವ ಭೀತಿ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸೌದಿ ಅರೆಬಿಯಾ ತಿಳಿಸಿದೆ.

ಭಾರತ ಸೇರಿ 16 ರಾಷ್ಟ್ರಗಳ ಜನರು ಗಲ್ಫ್​ ರಾಷ್ಟ್ರಗಳಿಗೆ ಪ್ರಯಾಣಿಸುವಂತಿಲ್ಲ. ಲೆಬನಾನ್​​, ಸಿರಿಯಾ, ಟರ್ಕಿ,ಇರಾನ್​​, ಅಫ್ಘಾನಿಸ್ತಾನ, ಯೆಮೆನ್, ಸೊಮಾಲಿಯಾ,ಇಥಿಯೋಪಿಯಾ, ಕಾಂಗೋ ಲಿಬಿಯಾ, ಇಂಡೋನೇಷಿಯಾ, ವಿಯೆಟ್ನಾಂ, ಅರ್ಮೆನಿಯಾ, ಬೆಲಾರಸ್​​ ಮತ್ತು ವೆನಿಜುವೆಲ್ಲಾ ರಾಷ್ಟ್ರವನ್ನು ನಿರ್ಬಂಧಿಸಿದೆ.

ಕರೊನಾ 4ನೇ ಅಲೆ ಒಂದೆಡೆಯಾದರೆ ಮತ್ತೊಂದೆಡೆ ಮಂಕಿಪಾಕ್ಸ್​​ ಕೂಡ ಕಂಡುಬರುತ್ತಿರುವುದರಿಂದ ಸೌದಿ ಅರೇಬಿಯಾ ಈ ನಿರ್ಧಾರಕ್ಕೆ ಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮಯ್ಯ ಬೇಕಾದರೆ ಗೋ ಮಾಂಸ ತಿನ್ನಲಿ, ಆದರೆ ವಕೀಲಿಕೆ ಮಾಡಬೇಡಿ:

Mon May 23 , 2022
  ಬೆಂಗಳೂರು: ದಲಿತರು, ಹಿಂದುಳಿದವರು, ಹಿಂದೂಗಳು, ಕ್ರೈಸ್ತರೂ ಗೋಮಾಂಸ ತಿನ್ನುತ್ತಾರೆ. ಹಾಗಾಗಿ ಗೋ ಮಾಂಸ ನಿಷೇಧ ಮಾಡಬಾರದೆಂದು ಸಿದ್ದರಾಮಯ್ಯ ಹೇಳಿದ್ದಾರೆ. ಬೇಕಾದರೆ ಅವರು ಗೋಮಾಂಸ ತಿನ್ನಲಿ. ಆದರೆ ವಕೀಲಿಕೆ ಮಾಡುವುದು ಬೇಡ ಎಂದು ಬಿಜೆಪಿ ರಾಜ್ಯ ವಕ್ತಾರ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ನಿರ್ಧಾರ ತೆಗೆದುಕೊಂಡಾಗ ಅದಕ್ಕೆ ಬೆಂಬಲ ನೀಡಬೇಕು. ಆದರೆ ಅದನ್ನು ವಿರೋಧಿಸುವುದು ಬೇಡ ಎಂದರು. ಸಿದ್ದರಾಮಯ್ಯ ದೇವಸ್ಥಾನಕ್ಕೆ‌ ಹೋಗುವಾಗ ಮಾಂಸ […]

Advertisement

Wordpress Social Share Plugin powered by Ultimatelysocial