ಕೊರೊನಾ ಭೀತಿಯಿಂದ ಕಳೆದ 10 ತಿಂಗಳ ನಂತರ ಶಾಲೆ ಆರಂಭವಾಗಿದ್ದು ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ಶಾಲೆಗೆ ವಿಧ್ಯಾರ್ಥಿಗಳು ಬಂದಿದ್ದಾರೆ. ಶಿಕ್ಷಕರು ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಿ ಮಾಸ್ಕ್, ಸ್ಯಾನಿಟೈಸ್ ನೀಡಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶಾಲೆಯ ಪಾಠಗಳು ಆರಂಭಿಸಿದ್ದಾರೆ.
ಸರ್ಕಾರಿ ಶಾಲೆಗೆ ಗ್ರಾಮ ಪಂಚಾಯತಿ ಸದಸ್ಯೆ ದೇವಕ್ಕ ಲಮಾಣಿ ಮತ್ತು ಮಲ್ಲೇಶಪ್ಪ ಲಮಾಣಿ ಅವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹೂ ನೀಡಿ, ಸಿಹಿ ಹಂಚಿ, ಮಾಸ್ಕ್, ಸ್ಯಾನಿಟೈಸರ್ , ಚೇರ್ ವಿತರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶಾಲೆಗೆ ಬರುವಂತೆ ಹೇಳಿದರು.
ಇದನ್ನೂ ಓದಿ: ಲಾರಿ ಮತ್ತು ಬೈಕ್ ನಡುವೆ ಅಪಘಾತ-ಸ್ಥಳದಲ್ಲಿ ಬೈಕ್ ಸವಾರ ಸಾವು