ಕಿಶೋರ್ ಈಗ “ಸೆಲ್ವ”. ನಿರ್ಮಾಪಕರ ಹುಟ್ಟುಹಬ್ಬದಂದು ಬಿಡುಗಡೆಯಾಗಿದೆ ಚಿತ್ರದ ಶೀರ್ಷಿಕೆ.

” ಜಾನ್ ಜಾನಿ ಜನಾರ್ದನ “,
“ಕಾಲೇಜ್ ಕುಮಾರ್” ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಎಲ್. ಪದ್ಮನಾಭ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಪದ್ಮನಾಭ ಅವರು ತನ್ವಿ ಮೀಡಿಯಾ ಕಾರ್ಪ್ ಸಂಸ್ಥೆ ಲಾಂಛನದಲ್ಲಿ ನಿರ್ಮಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿದೆ. ಬಹುಭಾಷಾ ನಟ ಕಿಶೋರ್ ನಾಯಕರಾಗಿ ಅಭಿನಯಿಸುತ್ತಿರುವ ಈ ಚಿತ್ರಕ್ಕೆ “ಸೆಲ್ವ” ಎಂದು ಹೆಸರಿಡಲಾಗಿದೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಿತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಇದು.
ನಂದು ಮಲೇಲ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ಸದ್ಯದಲ್ಲೇ ಅನಾವರಣವಾಗಲಿದೆ.
ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸಜಾದ್ ಕಾಕ್ಕು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

Please follow and like us:

Leave a Reply

Your email address will not be published. Required fields are marked *

Next Post

ಕುತ್ತಾರು "ಕೊರಗಜ್ಜ" ದೈವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಭೇಟಿ: "ಕರಿ ಹೈದ ಕರಿ ಅಜ್ಜ" ಚಿತ್ರ ತಂಡ ಹರ್ಷ...!

Mon Dec 12 , 2022
ಕನ್ನಡದಲ್ಲಿ “ಕೊರಗಜ್ಜ” ಸಿನಿಮಾ ಆಗುತ್ತಿರುವ ಹಿನ್ನೆಲೆ ಯಲ್ಲೇ ಖ್ಯಾತ ಹಿರಿಯ ನಟ ಶಿವರಾಜ್ ಕುಮಾರ್ ರವರು ಮಂಗಳೂರು ಸಮೀಪದ ಕುತ್ತಾರುವಿನ ಕೊರಗಜ್ಜ ದೈವ ಸ್ಥಾನಕ್ಕೆ ಭೇಟಿ ನೀಡಿ ಚಕ್ಕುಲಿ-ವೀಳ್ಯವನ್ನು ಸಮರ್ಪಿಸಿರುವುದು “ಕರಿ ಹೈದ ಕರಿ ಅಜ್ಜ” ಚಿತ್ರ ತಂಡಕ್ಕೆ ಇನ್ನಿಲ್ಲದ ಖುಷಿ ನೀಡಿದೆ. ಅಂತಾರಾಷ್ಟ್ರೀಯ ಖ್ಯಾತಿಯ ನಟ ಕಬೀರ್ ಬೇಡಿ ಜೊತೆ ಕನ್ನಡದ ಖ್ಯಾತ ಕಲಾವಿದರಾದ ಭವ್ಯ ಮತ್ತು ಶ್ರುತಿ ಕೂಡಾ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಭರತ್ ಸೂರ್ಯ ಎನ್ನುವ […]

Advertisement

Wordpress Social Share Plugin powered by Ultimatelysocial