ಒಂದೇ ಕುಟುಂಬ ಏಳು ಮಂದಿ ಆತ್ಮಹತ್ಯೆಗೆ ಯತ್ನ, ಮಹಿಳೆ ಸಾವು.

ರಾಮನಗರ, ಫೆಬ್ರವರಿ 3: ಸಾಲ ಬಾಧೆಗೆ ಸಿಲುಕಿದ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಯತ್ನಿಸಿದ್ದು , ಒಬ್ಬರು ಮೃತಪಟ್ಟಿರುವ ದಾರುಣ ಘಟನೆ ರಾಮನಗರ ತಾಲೂಕಿನ ದೊಡ್ಡಮಣ್ಣು ಗುಡ್ಡೆ ಗ್ರಾಮದಲ್ಲಿ ನಡೆದಿದೆ.

ದೊಡ್ಡಮಣ್ಣು ಗುಡ್ಡೆ ಗ್ರಾಮದಲ್ಲಿ ಕಳೆದ ಒಂದು ವರ್ಷಗಳಿಂದ ವಾಸವಾಗಿದ್ದ ರಾಜು (40) ಎನ್ನುವವರ ಕುಟುಂಬದ ಸದಸ್ಯರು ಸಾಲಗಾರರ ಕಾಟಕ್ಕೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿಷ ಸೇವಿಸಿದ ರಾಜು ಪತ್ನಿ ಮಂಗಳಮ್ಮ (28) ಸಾವನ್ನಪ್ಪಿದ್ದಾರೆ. ಇನ್ನುಳಿದ ಆರು ಮಂದಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ವಿಷ ಸೇವಿಸಿ ಮೃತಪಟ್ಟ ಮಂಗಳಮ್ಮ ಅವರ ಪತಿ ರಾಜು, ಮೃತಳ ತಾಯಿ ಸೋಂಪುರದಮ್ಮ, ಮೃತಳ ಮಕ್ಕಳಾದ ಆಕಾಶ್, ಕೃಷ್ಣ, ಮೃತಳ ಸಹೋದರಿ ಸವಿತಾ, ಅವರ ಪುತ್ರಿ ದರ್ಶಿನಿಯ ಸ್ಥಿತಿ ಗಂಭೀರವಾಗಿದೆ.

ಮೂಲತಃ ಬೆಂಗಳೂರಿನಲ್ಲಿ ತಾವರೆಕೆರೆ ಹೋಬಳಿ ಕುಂಬಳಗೂಡು ಸುಬ್ರಪ್ಪನ ಪಾಳ್ಯ ನಿವಾಸಿಯಾದ ರಾಜು ಹಾಗೂ ಮಂಗಳಮ್ಮ ದಂಪತಿಗಳು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ರಾಜು 11 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದು, ಸಾಲ ತೀರಿಸಲು ಆಗದೇ, ಸಾಲಗಾರರ ಕಾಟಕ್ಕೆ ಹೆದರಿ ತನ್ನ ಪತ್ನಿ ಮಂಗಳಮ್ಮ ತವರಾದ ದೊಡ್ಡಮಣ್ಣು ಗುಡ್ಡೆ ಗ್ರಾಮಕ್ಕೆ ಬಂದು ನೆಲಸಿದ್ದರು.

ರಾಜುಗೆ ಸಾಲ ನೀಡಿದವರು, ಆತ ತನ್ನ ಅತ್ತೆ ಮನೆಯಲ್ಲಿ ವಾಸವಾಗಿರುವುದನ್ನು ಪತ್ತೆ ಮಾಡಿ, ಹಣ ನೀಡುವಂತೆ ಕೇಳುತ್ತಿದ್ದರು.

ಸಾಲಗಾರರ ನೀಡುತ್ತಿದ್ದ ಕಿರುಕುಳಕ್ಕೆ ಬೆಸತ್ತ ರಾಜು ಸಾಯುವ ನಿರ್ಧಾರ ಮಾಡಿದ್ದಾನೆ. ಗುರುವಾರ ಮಧ್ಯಾಹ್ನ ಸುಮಾರು ಮೂರು ಗಂಟೆಗೆ ಮನೆಗೆ ಬೀಗ ಜಡಿದು, ಕುಟುಂಬಸ್ಥರೊಂದಿಗೆ ಊರಿನ ಹೊರಗೆ ತೆಳಿದ್ದಾರೆ. ಮನೆಯಿಂದ ಹೊರ ಹೋದವರು ರಾತ್ರಿ 8 ಗಂಟೆಯಾದರೂ ವಾಪಸ್‌ ಬರದಿರುವುದನ್ನು ಗಮನಿಸಿದ ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಗ್ರಾಮದ ಹೊರ ವಲಯದ ಜಮೀನಲ್ಲಿ ಮಕ್ಕಳು ಸೇರಿದಂತೆ ಮನೆ ಮಂದಿಯಲ್ಲ ವಿಷ ಸೇವಿಸಿರುವುದು ತಿಳಿದು ಬಂದಿದೆ. ಕೂಡಲೇ ಗ್ರಾಮಸ್ಥರು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಾಲಗಾರರ ಕಾಟದಿಂದ ಬೇಸತ್ತಿದ್ದ ರಾಜು ತನ್ನ ಕುಟುಂಬದ ಮಾನ ಹೋಗುವ ಭಯಕ್ಕೆ ಹೆದರಿ ಜೊತೆಗೆ ಮಾಡಿದ ಸಾಲ ತೀರಿಸಲು ಸಾಧ್ಯವಾಗದು ಎಂಬ ನಿರ್ಧಾರಕ್ಕೆ ಬಂದಿದ್ದ ಎನ್ನಲಾಗಿದ್ದು, ಕುಟುಂಬದ ಎಲ್ಲಾ ಸದಸ್ಯರೂ ತೀರ್ಮಾನಿಸಿಯೇ ಮನೆ ಬಿಟ್ಟು ಊರಿನ ಹೋರಗೆ ಹೋಗಿ ಮಕ್ಕಳಿಗೆ ಕಲ್ಲುಸಕ್ಕರೆ ಮತ್ತು ಬಾಳೆಹಣ್ಣು ಜೊತೆಗೆ ಇಲಿ ಪಾಷಾಣ ನೀಡಿದ್ದಾರೆ. ಅಲ್ಲದೆ ಮನೆ ಮಂದಿ ಊಟದ ಜೊತೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಿತಿನ್ ಗಡ್ಕರಿ, ದೇವೇಂದ್ರ ಫಡ್ನವೀಸ್ ತವರು ನೆಲದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ!

Fri Feb 3 , 2023
ಮುಂಬೈ ಫೆಬ್ರವರಿ 3: ನಿತಿನ್ ಗಡ್ಕರಿ, ದೇವೇಂದ್ರ ಫಡ್ನವೀಸ್ ಅವರ ತವರು ನೆಲದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಗುರುವಾರ ಮಹಾರಾಷ್ಟ್ರ ವಿಧಾನ ಪರಿಷತ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಒಕ್ಕೂಟದ ಅಭ್ಯರ್ಥಿ ಬಿಜೆಪಿ ಪಕ್ಷದ ಸ್ಪರ್ಧಿಯನ್ನು ಸೋಲಿಸಿದ್ದಾರೆ. ಹೀಗಾಗಿ ತನ್ನ ಭದ್ರಕೋಟೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. ನಾಗ್ಪರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನ ಕೇಂದ್ರ ಕಚೇರಿಯನ್ನು ಹೊಂದಿದೆ. ಜೊತೆಗೆ ಇದು ಕೇಂದ್ರ ಸಚಿವ […]

Advertisement

Wordpress Social Share Plugin powered by Ultimatelysocial