ಶಾಸಕನ ತೋಟದ ಕಾರ್ಮಿಕನಿಂದ ಗೋಮಾಂಸ ಮಾರಾಟ: ತೋಟದ ಆಸುಪಾಸೇ ಇವನ ಕೃತ್ಯ..

ಚಿಕ್ಕಮಗಳೂರು: ಕಾಂಗ್ರೆಸ್‌ ಶಾಸಕ ಟಿ.ಡಿ ರಾಜೇಗೌಡರ ಅವರ ತೋಟದಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಅಸ್ಸಾಂ ಮೂಲದ ಜಲೀಲ್ ಶೇಖ್‌ ಎಂಬಾತ ಹಿಂದೂ ಪರ ಸಂಘಟನೆಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.

ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡರ ತೋಟದಲ್ಲಿ ಕೆಲಸ ಮಾಡುವ ಈತ ಅಕ್ರಮವಾಗಿ ಗೋಮಾಂಸ ಸಾಗಾಣೆ ಮಾಡುತ್ತಿದ್ದ.

ಚಿಕ್ಕಮಗಳೂರಿನಿಂದ ಅಕ್ರಮವಾಗಿ ಗೋ ಮಾಂಸವನ್ನು ತಂದು ಶಾಸಕರ ತೋಟದ ಲೈನ್ ಜನರಿಗೆ ಗೋಮಾಂಸ ಸಾಗಾಟ ಮಾಡುತ್ತಿದ್ದ ಈತ.

10 ಕೆ.ಜಿ ಗೋಮಾಂಸದೊಂದಿಗೆ ಈತ ಹಿಂದೂ ಸಂಘಟನೆಯ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾನೆ. ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡರ ತೋಟದಲ್ಲಿ ಕೆಲಸ ಮಾಡುವ ಜಲೀಲ್‌ ಶೇಕ್.. ಬೈಕ್‌ನಲ್ಲಿ ಬಾಸಾಪುರದಿಂದ‌ ತೋಟಕ್ಕೆ ಹೋಗುವ ವೇಳೆ ಈತನನ್ನು ತಡೆಹಿಡಿದು ವಶಕ್ಕೆ ಪಡೆದಿದ್ದಾರೆ.

ಬಾಳೆಹೊನ್ನೂರು ಸಮೀಪದ ಕಣತಿ ಬಳಿ ಈ ಘಟನೆ ನಡೆದಿದೆ. ಈತ ತಾನು ಶಾಸಕ ಟಿ ಡಿ ರಾಜೇಗೌಡರ ತೋಟದಲ್ಲಿ ಕೆಲಸ ಮಾಡುತ್ತಿರುವ ಹೇಳಿದ್ದಾನೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಖಾನಾಪುರ: ಶಿಕ್ಷಕರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

Mon Feb 21 , 2022
ಖಾನಾಪುರ: ತಾಲ್ಲೂಕಿನ ರಾಜವಾಳಾ ಗೌಳಿವಾಡಾ ಶಾಲೆಯ ಶಿಕ್ಷಕರ ವಿರುದ್ಧ ಶನಿವಾರ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.ಗೌಳಿವಾಡಾ ಶಾಲೆಯ ಮುಂಭಾಗದಲ್ಲಿ ಶಾಲೆಯ ವಿದ್ಯಾರ್ಥಿಗಳು ನಿಂತು ಶನಿವಾರ ಮಧ್ಯಾಹ್ನ 12ರವರೆಗೆ ಶಾಲೆ ಇದ್ದರೂ ಶಿಕ್ಷಕರು ಬೇಗ ಕೊಠಡಿಗಳಿಗೆ ಬೀಗ ಜಡಿದು ತೆರಳಿದ್ದನ್ನು ಖಂಡಿಸಿದ ದೃಶ್ಯಗಳು ಹರಿದಾಡುತ್ತಿವೆ.1ರಿಂದ 5ನೇ ತರಗತಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಶಿಕ್ಷಕರು ನಿಯಮಿತವಾಗಿ ಶಾಲೆಗೆ ಬರುವುದಿಲ್ಲ, ಮಧ್ಯಾಹ್ನ ಬೇಗ ಮನೆಗೆ ತೆರಳುತ್ತಾರೆ, ಶಾಲಾ ಅವಧಿಯಲ್ಲಿ […]

Advertisement

Wordpress Social Share Plugin powered by Ultimatelysocial