‘ಛೂ ಮಂತರ್’ ಎಂದು ನಗಿಸಿ ಭಯ ಹುಟ್ಟಿಸಲು ಬರ್ತಿದ್ದಾರೆ ಶರಣ್- ಚಿಕ್ಕಣ್ಣ

‘ಗುರುಶಿಷ್ಯರು’ ಸಿನಿಮಾದಲ್ಲಿ ನಟಿಸಿದ್ದ ನಟ ಶರಣ್ ಈ ‘ಛೂ ಮಂತರ್’ ಎನ್ನುತ್ತಿದ್ದಾರೆ. ಚಿತ್ರದಲ್ಲಿ ಮೇಘನಾ ಗಾಂವ್ಕರ್ ಹಾಗೂ ಅದಿತಿ ಪ್ರಭುದೇವ ನಾಯಕಿಯರಾಗಿ ನಟಿಸಿದ್ದಾರೆ. ಶರಣ್ ಜೊತೆ ಕಾಮಿಡಿ ಕಳಗುಳಿ ಇಡಲು ಮತ್ತೊಮ್ಮೆ ಚಿಕ್ಕಣ್ಣ ಕೈ ಜೋಡಿಸಿದ್ದಾರೆ.

ಸದ್ಯ ಚಿತ್ರದ ಫಸ್ಟ್‌ ಲುಕ್ ಮೋಷನ್ ಪೋಸ್ಟರ್ ರಿಲೀಸ್ ಆಗಿ ಸದ್ದು ಮಾಡ್ತಿದೆ.

‘ಕರ್ವ’ ಎನ್ನುವ ಹಾರರ್ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಕಟ್ಟಿಕೊಟ್ಟಿದ್ದ ನವನೀತ್ ಈ ಚಿತ್ರಕ್ಕೂ ಆಕ್ಷನ್ ಕಟ್ ಹೇಳಿದ್ದಾರೆ. ‘ಛೂ ಮಂತರ್’ ಚಿತ್ರಕ್ಕೆ ತರುಣ್ ಶಿವಪ್ಪ ಬಂಡವಾಳ ಹೂಡಿದ್ದು ಇದು ಅವರ ಬ್ಯಾನರ್‌ನ 5ನೇ ಸಿನಿಮಾ ಎನ್ನುವುದು ವಿಶೇಷ. ಈ ಹಾರರ್ ಕಾಮಿಡಿ ಚಿತ್ರವನ್ನು ಅನೂಪ್ ಕಟ್ಟುಕರನ್ ಸೆರೆ ಹಿಡಿದಿದ್ದಾರೆ. ವೆಂಕಿ ಸಂಕಲನ, ರವಿವರ್ಮಾ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಹಾರರ್ ಜೊತೆಗೆ ಕಾಮಿಡಿ ಸೇರಿಸಿ ಬಹಳ ಮಜವಾಗಿ ಸಿನಿಮಾ ಕಟ್ಟಿಕೊಡಲಾಗಿದೆ. ಈಗಾಗಲೇ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು ಹಾಡುಗಳ ಚಿತ್ರೀಕರಣ ನಡೀತಿದೆ.

ಒಂದು ಬೂತ ಬಂಗಲೆ. ಆ ಬಂಗಲೆಯಲ್ಲಿ ಎದುರಾಗುವ ಸಮಸ್ಯೆಗಳ ಸುತ್ತಾ ಈ ಸಿನಿಮಾ ಸುತ್ತುತ್ತದೆ ಎನ್ನುವುದು ಮೋಷನ್ ಪೋಸ್ಟರ್‌ನಲ್ಲಿ ಅರ್ಥವಾಗ್ತಿದೆ. ಚಿತ್ರದಲ್ಲಿ ಪ್ರಭು ಮುಂಡ್ಕರ್, ರಜಿನಿಕಾ ಭಾರಧ್ವಜ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ. ಮೈಸೂರು, ಉತ್ತರಕಾಂಡ, ಬೆಂಗಳೂರು ಹಾಗೂ ಲಂಡನ್‌ನಲ್ಲಿ ‘ಛೂ ಮಂತರ್’ ಸಿನಿಮಾ ಚಿತ್ರೀಕರಣ ನಡೆದಿದೆ. ಶೀಘ್ರದಲ್ಲೇ ತೆರೆಗೆ ಬರಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೆಹಲಿಯ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್

Tue Jan 3 , 2023
  ಭಾನುವಾರ ಮುಂಜಾನೆ ದೆಹಲಿಯ ಸುಲ್ತಾನಪುರಿಯಲ್ಲಿ ಸಂಭವಿಸಿದ ಕಾರು-ಸ್ಕೂಟಿ ಅಪಘಾತಕ್ಕೆ (Accident in Delhi) ಇದೀಗ ಹೊಸ ತಿರುವೊಂದು ಸಿಕ್ಕಿದೆ. ಅಪಘಾತದಲ್ಲಿ ಮೃತಳಾದ ಯುವತಿಯ ಜತೆಯಲ್ಲಿ ಮತ್ತೊಬ್ಬ ಯುವತಿ ಸ್ಕೂಟಿಯಲ್ಲಿ ಇದ್ದಿದ್ದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.ಮೃತಳಾದ ಯುವತಿ ಹಾಗೂ ಆಕೆಯ ಸ್ನೇಹಿತೆ ಶನಿವಾರ ರಾತ್ರಿ ಹೋಟೆಲ್ ಒಂದರಲ್ಲಿ ಸ್ನೇಹಿತೆಯ ಬರ್ತ್‌ಡೇ ಪಾರ್ಟಿಗೆಂದು ತೆರಳಿದ್ದರು. ಅಲ್ಲಿಂದ ಭಾನುವಾರ ಮುಂಜಾನೆ ಇಬ್ಬರೂ ಒಟ್ಟಿಗೆ ಸ್ಕೂಟಿಯಲ್ಲಿ ಬಂದಿದ್ದಾರೆ. ಆಗ ಈ ಅಪಘಾತ ಸಂಭವಿಸಿದೆ. ಒಬ್ಬ […]

Advertisement

Wordpress Social Share Plugin powered by Ultimatelysocial