ಪರಪ್ಪನ ಅಗ್ರಹಾರ ಜೈಲಿನಲ್ಲಿ ಜಯಲಲಿತ ಆಪ್ತೆ ಶಶಿಕಲಾಗೆ ಸೌಕರ್ಯಗಳನ್ನು ನೀಡಿ ಸಹಾಯ ಮಾಡಿದ್ದ ಪೊಲೀಸರಿಗೆ ಸಂಕಷ್ಟ ಎದುರಾಗಿದ್ದು, ಶಶಿಕಲಾ ಹಾಗೂ ಜೈಲು ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.
ಜೈಲಿನ ಅಧಿಕಾರಿ ಆಗಿದ್ದ ಕೃಷ್ಣ ಕುಮಾರ್, ಕೆ.ಶಶಿಕಲಾ, ಇಳವರಸಿ ವಿರುದ್ದ ಚಾರ್ಜ್ ಶೀಟ್ ಸಲ್ಲಿ ಮಾಡಲಾಗಿದ್ದು, ಜಯಲಲಿತಾ ಆಪ್ತೆ ಶಶಿಕಲಾರಿಂದ ಲಂಚ ಪಡೆದ ಆರೋಪ ಕೇಳಿ ಬಂದ ಹಿನ್ನೆಲೆ ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು.
ಜೈಲಿನಲ್ಲಿ ಸೌಕರ್ಯ ಕಲ್ಪಿಸಲು ಲಂಚ ಪಡೆದ ಆರೋಪ ಹಿನ್ನಲೆ ಈ ತನಿಖೆ ನಡೆದಿದ್ದು, ಜ.7 ರಂದೇ ಹೈಕೋರ್ಟ್ ಗೆ ಎಸಿಬಿ ಆರೋಪಪಟ್ಟಿ ಸಲ್ಲಿಸಿದೆ. ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್ ಗೆ ಸರ್ಕಾರ ಪೂರ್ವಾನುಮತಿ ನೀಡಿತ್ತು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪೂರ್ವಾನುಮತಿ ನೀಡಲಾಗಿದೆ.
ಕೃಷ್ಣಕುಮಾರ್ ಶಶಿಕಲಾ ಜೈಲಲ್ಲಿ ಇದ್ದಾಗ ಜೈಲಿನ ಸೂಪರಿಡೆಂಟ್ ಆಗಿದ್ರು, ಕೃಷ್ಣಕುಮಾರ್ ವರ್ಗಾವಣೆ ಬಳಿಕ ಇನ್ನೊಬ್ಬರ ಅಧಿಕಾರಿ ಆಗಿ ಅಧಿಕಾರವಹಿಸಿಕೊಂಡಿದ್ರು. ಈ ಸಮಯದಲ್ಲಿ ಜೈಲಿನಲ್ಲಿದ್ದ ಶಶಿಕಲಾಗೆ ರಾಜಾತಿಥ್ಯ ನೀಡಿದ್ದು ಸಾಬೀತಾಗಿದ್ದು, ಕೋಟಿ ಕೋಟಿ ಹಣ ಪಡೆದಿದ್ದಾರೆ ಅನ್ನೋ ಆರೋಪ ಮಾಡಲಾಗಿತ್ತು.ಜೈಲಿನಿಂದ ಬಿಡುಗಡೆಯಾದರೂ ನಿಲ್ಲದ ಸಂಕಷ್ಟ
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಆರೋಪದ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಆಪ್ತೆ ಹಾಗೂ ಎಐಎಡಿಎಂಕೆ ನಾಯಕಿ ಶಶಿಕಲಾ ನಟರಾಜನ್ ಜೈಲುವಾಸ ಅನುಭವಿಸಿದ್ದರು.2017ರಲ್ಲಿ ಈ ಪ್ರಕರಣದಲ್ಲಿ ಶಶಿಕಲಾ ಸೇರಿ ಮತ್ತಿಬ್ಬರಿಗೆ 10 ಕೋಟಿ ರೂ. ದಂಡ, 4 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿತ್ತು. ನ್ಯಾಯಾಲಯ ವಿಧಿಸಿದ್ದ 10 ಕೋಟಿ ರೂ. ದಂಡವನ್ನು ಶಶಿಕಲಾ ಅವರ ಸಂಬಂಧಿಕರು ಪಾವತಿಸಿದ್ದರು.
ಇನ್ನು 2021ರಲ್ಲಿ ಶಶಿಕಲಾ ಬಿಡುಗಡೆಯಾದ ಸಮಯದಲ್ಲಿ ಅಭಿಮಾನಿಗಳು ಬೆಂಗಳೂರಿನಲ್ಲಿಯೇ ಸಂಭ್ರಮ ಆಚರಿಸಿದ್ದರು. ಆದರೆ ಶಶಿಕಲಾ ಜೈಲಿನಿಂದ ಬಿಡುಗಡೆಯಾದರೂ ಸಹ ಸಂಕಷ್ಟ ಮಾತ್ರ ಅವರ ಬೆನ್ನ ಹಿಂದೆ ಬಿದ್ದಿದೆ.
ಜೈಲಿನಲ್ಲಿ ಸೌಕರ್ಯ ಕಲ್ಪಿಸಲು ಲಂಚ ಪಡೆದ ಆರೋಪ ಹಿನ್ನಲೆ ಈ ತನಿಖೆ ನಡೆದಿದ್ದು, ಜ.7 ರಂದೇ ಹೈಕೋರ್ಟ್ ಗೆ ಎಸಿಬಿ ಆರೋಪಪಟ್ಟಿ ಸಲ್ಲಿಸಿದೆ. ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್ ಗೆ ಸರ್ಕಾರ ಪೂರ್ವಾನುಮತಿ ನೀಡಿತ್ತು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪೂರ್ವಾನುಮತಿ ನೀಡಲಾಗಿದೆ.
ಕೃಷ್ಣಕುಮಾರ್ ಶಶಿಕಲಾ ಜೈಲಲ್ಲಿ ಇದ್ದಾಗ ಜೈಲಿನ ಸೂಪರಿಡೆಂಟ್ ಆಗಿದ್ರು, ಕೃಷ್ಣಕುಮಾರ್ ವರ್ಗಾವಣೆ ಬಳಿಕ ಇನ್ನೊಬ್ಬರ ಅಧಿಕಾರಿ ಆಗಿ ಅಧಿಕಾರವಹಿಸಿಕೊಂಡಿದ್ರು. ಈ ಸಮಯದಲ್ಲಿ ಜೈಲಿನಲ್ಲಿದ್ದ ಶಶಿಕಲಾಗೆ ರಾಜಾತಿಥ್ಯ ನೀಡಿದ್ದು ಸಾಬೀತಾಗಿದ್ದು, ಕೋಟಿ ಕೋಟಿ ಹಣ ಪಡೆದಿದ್ದಾರೆ ಅನ್ನೋ ಆರೋಪ ಮಾಡಲಾಗಿತ್ತು.ಜೈಲಿನಿಂದ ಬಿಡುಗಡೆಯಾದರೂ ನಿಲ್ಲದ ಸಂಕಷ್ಟ
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಆರೋಪದ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಆಪ್ತೆ ಹಾಗೂ ಎಐಎಡಿಎಂಕೆ ನಾಯಕಿ ಶಶಿಕಲಾ ನಟರಾಜನ್ ಜೈಲುವಾಸ ಅನುಭವಿಸಿದ್ದರು.2017ರಲ್ಲಿ ಈ ಪ್ರಕರಣದಲ್ಲಿ ಶಶಿಕಲಾ ಸೇರಿ ಮತ್ತಿಬ್ಬರಿಗೆ 10 ಕೋಟಿ ರೂ. ದಂಡ, 4 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿತ್ತು. ನ್ಯಾಯಾಲಯ ವಿಧಿಸಿದ್ದ 10 ಕೋಟಿ ರೂ. ದಂಡವನ್ನು ಶಶಿಕಲಾ ಅವರ ಸಂಬಂಧಿಕರು ಪಾವತಿಸಿದ್ದರು.
ಇನ್ನು 2021ರಲ್ಲಿ ಶಶಿಕಲಾ ಬಿಡುಗಡೆಯಾದ ಸಮಯದಲ್ಲಿ ಅಭಿಮಾನಿಗಳು ಬೆಂಗಳೂರಿನಲ್ಲಿಯೇ ಸಂಭ್ರಮ ಆಚರಿಸಿದ್ದರು. ಆದರೆ ಶಶಿಕಲಾ ಜೈಲಿನಿಂದ ಬಿಡುಗಡೆಯಾದರೂ ಸಹ ಸಂಕಷ್ಟ ಮಾತ್ರ ಅವರ ಬೆನ್ನ ಹಿಂದೆ ಬಿದ್ದಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us: