ನಟ, ಮಾಜಿ ಸಂಸದ ಶಶಿಕುಮಾರ್ ದೆಹಲಿಯ ಕರ್ನಾಟಕದ ಭವನದ ಬಾಡಿಗೆ ಬಾಕಿ ಉಳಿಸಿಕೊಂಡಿದ್ದಾರೆ.
ಸಂಸದರಾಗಿದ್ದಂತಹ ಸಂದರ್ಭದಲ್ಲಿ ಕರ್ನಾಟಕ ಭವನ ಬಳಕೆ ಮಾಡಿದ್ದರು. ಇದಕ್ಕೆ 3.72 ಲಕ್ಷ ರೂ. ಬಾಡಿಗೆ ಪಾವತಿಸಿಲ್ಲ.
ಇದನ್ನು ಗಮನಿಸಿದ ಕಂದಾಯ ಇಲಾಖೆ ಇದೀಗ ಬಾಡಿಗೆ ವಸೂಲಿ ಮಾಡುವಂತೆ ರಾಜ್ಯ ಶಿಷ್ಟಾಚಾರದ ಅಧೀನ ಕಾರ್ಯದರ್ಶಿಗಳು ಏ.19ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ಸಾಕಷ್ಟು ಆರ್ಥಿಕ ಸಮಸ್ಯೆಗೆ ಸಿಲುಕಿರುವ ಶಶಿಕುಮಾರ್ ಅವರು ಇದೀಗ ಮತ್ತೊಂದು ತೊಂದರೆಗೆ ಸಿಲುಕಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಮೊಣಕಾಲ್ನೂರು ಅಥವಾ ಚಳ್ಳಕೆರೆ ಎಸ್ ಟಿ ಮೀಸಲು ಕ್ಷೇತ್ರದಿಂದ ಕಣಕ್ಕಿಳಿಯಲು ಅಣಿಯಾಗುತ್ತಿದ್ದಾರೆ.
Tags ಕರ್ನಾಟಕ ಭವನ ನಟ ಶಶಿಕುಮಾರ್
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada