ಶೀಲ ಶಂಕಿಸಿ ಉಸಿರುಗಟ್ಟಿಸಿ ಪತ್ನಿ ಕೊಲೆಗೈದ ಪತಿ ಪರಾರಿ

ತನ್ನ ಪತ್ನಿಯ ಶೀಲ ಶಂಕಿಸಿ, ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ತಾವರೆಕೆರೆಯ ಸುಭಾಷ್ ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ.
ಸುಭಾಷ್ ನಗರದ ನಾಜ್ಹ್ (22) ಕೊಲೆಯಾದವರು, ಆಕೆಯನ್ನು ಉಸಿರು ಗಟ್ಟಿಸಿಕೊಲೆ ಮಾಡಿದ ಪತಿರಾಯ ನಾಸಿರ್
ಬಾಮೈದನಿಗೆ ಮೆಸೇಜ್ ಕಳುಹಿಸಿ ಪರಾರಿಯಾಗಿದ್ದಾನೆ.
ದಂಪತಿಯು ಕಳೆದ 6 ತಿಂಗಳಿನಿಂದ ಫ್ಲ್ಯಾಟ್ ನಲ್ಲಿ ವಾಸವಿದ್ದು, ಸಂಸಾರ ಚೆನ್ನಾಗಿತ್ತು. ಆದರೆ ನಾಸಿರ್ ಹುಸೇನ್ ಇತ್ತೀಚೆಗೆ ಪತ್ನಿಯ ಶೀಲ ಶಂಕಿಸಿ ಗಲಾಟೆ ಮಾಡುವುದಕ್ಕೆ ಶುರು ಮಾಡಿಕೊಂಡಿದ್ದ.
ಗಲಾಟೆಯು ವಿಕೋಪಕ್ಕೆ ತಿರುಗಿ ಇಂದು ಮಧ್ಯಾಹ್ನ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಆರೋಪಿ ಪತಿ ಖಾಸಗಿ ಕಂಪೆನಿಯಲ್ಲಿ ಕೆಲಸ ಕೆಲಸ ಮಾಡಿಕೊಂಡಿದ್ದ. ಈ ಸಂಬಂಧ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಟಿ ಐಶ್ವರ್ಯಾಗೆ ಐಟಿ ಶಾಕ್.

Tue Jan 17 , 2023
ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಮಹಾರಾಷ್ಟ್ರದ ನಾಸಿಕ್ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಸಿನ್ನಾರ್‌ನ ತಂಗಾವ್ ಬಳಿಯ ಅಡ್ವಾಡಿಯ ಗುಡ್ಡಗಾಡು ಪ್ರದೇಶದಲ್ಲಿ ೧ ಹೆಕ್ಟೇರ್‌ಗೂ ಹೆಚ್ಚು ಜಮೀನನ್ನು ಐಶ್ವರ್ಯಾ ರೈ ಅವರು ಹೊಂದಿದ್ದು, ಈ ಆಸ್ತಿಯ ತೆರಿಗೆ ಪಾವತಿಸದ ಹಿನ್ನಲೆಯಲ್ಲಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ತೆರಿಗೆ ಕಟ್ಟುವಂತೆ ನೀಡಲಾಗಿದ್ದ ಗಡುವು ಮುಗಿದಿದ್ದರೂ ೨೨,೦೦೦ ರೂ. ಭೂ […]

Advertisement

Wordpress Social Share Plugin powered by Ultimatelysocial