ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆಯಾಗಿದೆ. ಹಾಗಾಗಿ ಈ ಕೂಡಲೇ ಶಿವಮೊಗ್ಗದಲ್ಲಿರುವ ವಿಮಾನ ನಿಲ್ದಾಣದ ಟರ್ಮಿನಲ್ ಕಮಲದ ರೂಪದಲ್ಲಿ ಇರುವುದರಿಂದ, ಅದಕ್ಕೆ ಹೊದಿಕೆ ಹಾಕಬೇಕೆಂದು ಚುನಾವಣಾ ಅಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿದೆ. ಶಿವಮೊಗ್ಗ ಕರ್ನಾಟಕ ವಿಧಾನ ಸಭಾ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಕಮಲ ರೂಪದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣದ ಟರ್ಮಿನಲ್ಗೆ ಹೊದಿಕೆ ಹಾಕುವಂತೆ ಚುನಾವಣಾ ಅಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿದೆ. ಇದು ನೀತಿ ಸಂಹಿತೆ ಉಲ್ಲಂಘನೆ ಆಗುವುದರಿಂದ ಕೂಡಲೇ ಚುನಾವಣಾ ಆಯೋಗ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಚುನಾವಣೆ ಮುಗಿಯುವವರೆಗೂ ಹೊದಿಕೆ ಹಾಕಿ ಮುಚ್ಚಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಕಮಲ ಆಕಾರದ ವಿಮಾನ ನಿಲ್ದಾಣದ ಟರ್ಮಿನಲ್ ಪೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ಇದು ನಮ್ಮ ಸಾಧನೆ ಎಂದು ಬಿಜೆಪಿ ಪಕ್ಷ ಬಿಂಬಿಸುತ್ತಿದೆ ಹಾಗಾಗಿ ಚುನಾವಣೆ ಮುಗಿಯುವವರೆಗೂ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಸಂಪೂರ್ಣ ಪರದೆಯಿಂದ ಮುಚ್ಚಬೇಕು ಹಾಗೂ ಸಾರಿಗೆ ಬಸ್ಗಳಲ್ಲಿ ಇರುವ ಸರ್ಕಾರದ ಜಾಹೀರಾತುಗಳನ್ನು ಸಹ ತೆರವು ಮಾಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ದೇವೆಂದ್ರಪ್ಪ ಹಾಗೂ ಕವಿತಾ ರಾಘವೇಂದ್ರ, ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
https://play.google.com/store/apps/details?id=com.speed.newskannada