ಶಿವಮೊಗ್ಗದ ಪಿ ಆಯಂಡ್ ಟಿ ಕಾಲೊನಿ ನಿವಾಸಿ ಮೊದಲ ತಿರುವಿನಲ್ಲಿ 25 ಚದರ ಅಡಿ ವಿಸ್ತೀರ್ಣದ ಡೂಫ್ಲೆಕ್ಸ್ ಮನೆಯನ್ನು ನೆಲದಿಂದ ಸುಮಾರು ಆರು ಅಡಿ ಮೇಲೆತ್ತುವ ಕಾರ್ಯ ನಡೆಸಿದ್ದಾರೆ.
ಶ್ರೀನಿವಾಸ ಮೂರ್ತಿ ಅವರು ಉದ್ಯೋಗ ಮತ್ತು ವಿನಿಮಯ ಕಚೇರಿ ನಿವೃತ್ತ ಉಪ ನಿರ್ದೇಶಕ ಅವರು ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಿದ್ದ ಮನೆ ಈಗ ರಸ್ತೆ ಮಟ್ಟದಿಂದ 6 ಅಡಿ ಕೆಳಗಿತ್ತು. ಪ್ರತಿ ವರ್ಷ ಮಳೆಗಾಲದಲ್ಲೂ ಮನೆಗೆ ನೀರು ನುಗ್ಗುತ್ತಿತ್ತು. ಶ್ರೀನಿವಾಸ ಮೂರ್ತಿ ಅವರ ಪುತ್ರ, ಭದ್ರಾವತಿಯ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕ ಕೆ.ಎಸ್. ಮಂಜುನಾಥ್ ಅವರು ತಂದೆ ಕಟ್ಟಿದ ಪ್ರೀತಿಯ ಮನೆಯನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳಬೇಕು ಎಂದು ಬಿಹಾರ ಮೂಲದ ಶ್ರೀರಾಮ್ ಸಂಸ್ಥೆಯನ್ನು ಸಂಪರ್ಕಿಸಿದ್ದರು. ಆ ಸಂಸ್ಥೆಯ ತಂತ್ರಜ್ಞರು ಮನೆಯನ್ನು ಹಂತ ಹಂತವಾಗಿ ಮೇಲೆತ್ತುತ್ತಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada