ಶಿವಸೇನೆ ಹೆಸರು, ಚಿಹ್ನೆಯನ್ನು ಮುಖ್ಯಮಂತ್ರಿ ಏಕನಾಥ ಶಿಂಧೆ ಬಣಕ್ಕೆ ನೀಡಿರುವುದನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಲ್ಲಿಸಿದ ಅರ್ಜಿ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್
ನೋಟೀಸ್ ಜಾರಿ ಮಾಡಿದೆ.ಏಕನಾಥ ಶಿಂಧೆ ಬಣವನ್ನು ಶಿವಸೇನೆ ಎಂದು ಗುರುತಿಸಿ ಅದಕ್ಕೆ ‘ಬಿಲ್ಲು-ಬಾಣ’ ಚಿಹ್ನೆ ನಿಗದಿಪಡಿಸಿದ ಚುನಾವಣಾ ಸಮಿತಿಯ ನಿರ್ಧಾರವನ್ನು ಪ್ರಶ್ನಿಸಿ ಉದ್ಧವ್ ಠಾಕ್ರೆ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.ವಿಚಾರಣೆಯ ಸಂದರ್ಭದಲ್ಲಿ, ಏಕನಾಥ್ ಶಿಂಧೆ ಬಣವ ಉದ್ಧವ್ ಠಾಕ್ರೆ ಶಿಬಿರದ ಅರ್ಜಿ ಪ್ರಶ್ನಿಸಿತು, ಮಾಜಿ ಮಹಾರಾಷ್ಟ್ರ ಮುಖ್ಯಮಂತ್ರಿ ಚುನಾವಣಾ ಆಯೋಗದ ಆದೇಶದ ವಿರುದ್ಧ ಮೊದಲು ದೆಹಲಿ ಹೈಕೋರ್ಟ್ಗೆ ಹೋಗಬೇಕೆಂದು ಸೂಚಿಸಿದ್ದಾರೆ.ಶಿವಸೇನೆಯ ಆಸ್ತಿ ಮತ್ತು ಹಣಕಾಸು ಸ್ವಾಧೀನಪಡಿಸಿಕೊಳ್ಳದಂತೆ ಏಕನಾಥ ಶಿಂಧೆ ಬಣವನ್ನು ತಡೆಯಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. “ಚುನಾವಣಾ ಆಯೋಗ್ ಆದೇಶಕ್ಕೆ ತಡೆಯಾಜ್ಞೆ ನೀಡುತ್ತದೆ ಮತ್ತು ಅವರು ಅಲ್ಲಿ ಯಶಸ್ವಿಯಾಗಿರುವುದರಿಂದ ನಅದನ್ನು ಮಾಡಲು ಸಾಧ್ಯವಿಲ್ಲ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ.ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಏಕನಾಥ ಶಿಂಧೆ ಶಿಬಿರ ಶಿವಸೇನಾ ಕಚೇರಿ ಸ್ವಾಧೀನಪಡಿಸಿಕೊಂಡಿದ್ದರಿಂದ ಚುನಾವಣಾ ಸಮಿತಿಯ ಆದೇಶವ ಪ್ರಶ್ನಿಸಿ ಠಾಕ್ರೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.ನಂತರ, ದೆಹಲಿಯಲ್ಲಿರುವ ಶಿವಸೇನಾ ಸಂಸದೀಯ ಪಕ್ಷದ ಕಚೇರಿಯನ್ನು ಏಕನಾಥ ಶಿಂಧೆ ಬಣಕ್ಕೆ ನೀಡಲಾಗಿದೆ ಎಂದು ಲೋಕಸಭೆಯ ಕಾರ್ಯದರ್ಶಿ ಮಾಹಿತಿ ನೀಡಿದರು.ಪತ್ನಿ ಕೊಂದು ವಾಟ್ಸಾಪ್ ಸ್ಟೇಟಸ್ ಹಾಕಿ
ಆತ್ಮಹತ್ಯೆಗೆ ಶರಣಾದ ಪತಿಚಾಮರಾಜನಗರ,ಫೆ.22-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ವಾಟ್ಸಾಪ್ ಸ್ಟೇಟಸ್ ಹಾಕಿ ಖತರ್ನಾಕ್ ಪತಿಯೊಬ್ಬ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದಿದೆ.ನಾಗಮಲೆಯ ಲಕ್ಷ್ಮಿ ಕೊಲೆಯಾದ ದುರ್ದೈವಿ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಎರಭಯ್ಯನ ಹಳ್ಳಿಯ ಮುನಿರಾಜ್ ಎಂಬವರನ್ನು ಮದುವೆಯಾಗಿದ್ದಳು. ಬಳಿಕ ತನ್ನ ಗಂಡನನ್ನು ತೊರೆದು ಬೇರೊಬ್ಬನೊಂದಿಗೆ ನಾಗಮಲೆಯಲ್ಲಿ ವಾಸವಾಗಿದ್ದಳು. ಇದರಿಂದ ಬೇಸತ್ತಿದ್ದ ಗಂಡ ಮುನಿರಾಜ್ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.ಪತ್ನಿಯ ಮೇಲೆ ಕಲ್ಲು ಎತ್ತಿಹಾಕಿ ಆಕೆಯ ರಕ್ತ ಸಿಕ್ತ ದೇಹವನ್ನು ಮೊಬೈಲ್ನಲ್ಲಿ ವೀಡಿಯೋ ಮಾಡಿ ವಾಟ್ಸಪ್ ಸ್ಟೇಟಸ್ ಹಾಕಿಕೊಂಡು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada