ಶಿವಮೊಗ್ಗದಲ್ಲಿ ಕಳೆದ ಸೆಪ್ಟೆಂಬರ್ ೧೯ರಂದು ಬೆಳಕಿಗೆ ಬಂದ ಉಗ್ರಗಾಮಿ ಚಟುವಟಿಕೆಗಳಿಗೆ (Shivamogga terror) ಸಂಬಂಧಿಸಿ ತೀವ್ರ ತನಿಖೆಯನ್ನು ನಡೆಸುತ್ತಿರುವ ಎನ್ಐಎ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿ ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.ಗುರುವಾರ ಮಂಗಳೂರಿನ ಪಿಎ ಎಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿ ಉಡುಪಿ ಮೂಲದ ವಿದ್ಯಾರ್ಥಿ ರೇಶಾನ್ ತಾಜುದ್ದೀನ್ ಶೇಖ್ನನ್ನು ಬಂಧಿಸಿದ್ದ ಎನ್ಐಎ, ಶಿವಮೊಗ್ಗದಲ್ಲಿ ಹುಜೇರ್ ಫರಾನ್ ಬೇಗ್ ಎಂಬಾತನನ್ನು ವಶಕ್ಕೆ ಪಡೆದಿದೆ.ಸೆಪ್ಟೆಂಬರ್ ೧೯ರಂದು ಬೆಳಕಿಗೆ ಬಂದ ಶಿವಮೊಗ್ಗ ಟೆರರ್ ಚಟುವಟಿಕೆಗೆ ಸಂಬಂಧಿಸಿ ಮಂಗಳೂರಿನ ಎಂಜಿನಿಯರಿಂಗ್ ಪದವೀಧರ ಮಾಜ್ ಮುನೀರ್ ಮತ್ತು ಶಿವಮೊಗ್ಗದ ಸೈಯದ್ ಯಾಸಿನ್ನ್ನು ಬಂಧಿಸಲಾಗಿತ್ತು. ಅಂದು ಇವರೆಲ್ಲರ ಹಿಂದಿನ ಷಡ್ಯಂತ್ರಗಾರ ತೀರ್ಥಹಳ್ಳಿ ನಿವಾಸಿ ಮೊಹಮ್ಮದ್ ಶಾರಿಕ್ ತಪ್ಪಿಸಿಕೊಂಡಿದ್ದ. ಮುಂದೆ ನವೆಂಬರ್ ೧೯ರಂದು ಸಂಜೆ ಮಂಗಳೂರಿನ ನಾಗುರಿ ಬಳಿ ಕುಕ್ಕರ್ ಬ್ಲಾಸ್ಟ್ ಮಾಡಲು ಹೋಗುತ್ತಿದ್ದಾಗ ಅದು ರಿಕ್ಷಾದಲ್ಲೇ ಸ್ಫೋಟಿಸಿ ಮೊಹಮ್ಮದ್ ಶಾರಿಕ್ ಸಿಕ್ಕಿಬಿದ್ದಿದ್ದ. ಈಗ ಆತ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಎನ್ಐಎ ಅಧಿಕಾರಿಗಳು ಆತನನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada