ಅಲ್ಲದೇ ಬೈಕ್ ಗಳಿಗೆ ಬೆಂಕಿ ಹಚ್ಚಿ, ಕಾರುಗಳ ಗ್ಲಾಸ್ ಗಳನ್ನು ಪುಡಿ ಪುಡಿ ಮಾಡಿರೋ ಘಟನೆ ಕೂಡ ನಡೆದಿದೆ. ಹೀಗಾಗಿ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನತೆಯನ್ನು ತಲುಪಿದೆ ಎನ್ನಲಾಗಿದೆ.
ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ನಂತ್ರ, ಇಂದು ಮೆಗ್ಗಾನ್ ನಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ, ಕುಟುಂಬಸ್ಥರಿಗೆ ಹರ್ಷ ಫಾರ್ಥೀವ ಶರೀರವನ್ನು ಹಸ್ತಾಂತರಿಸಲಾಗಿತ್ತು. ಮೆಗ್ಗಾನ್ ಆಸ್ಪತ್ರೆಯಿಂದ ಹರ್ಷ ಮನೆ ಇರುವಂತ ಬಸವನ ಬೀದಿಯವರೆಗೆ ಮೆರವಣಿಗೆಯಲ್ಲಿ ಮೃತದೇಹವನ್ನು ಕೊಂಡೊಯ್ಯಲಾಗುತ್ತಿತ್ತು.
ಈ ಸಂದರ್ಭದಲ್ಲಿ ಮೆರವಣಿಗೆ ವೇಳೆಯಲ್ಲಿ ಎನ್ ಟಿ ರಸ್ತೆಯಲ್ಲಿ ಸಿಕ್ಕ ಸಿಕ್ಕ ಮನೆಗಳು, ವಾಹನಗಳ ಮೇಲೆ ರೊಚ್ಚಿಗೆದ್ದಂತ ವಿವಿಧ ಗುಂಪುಗಳು ಕಲ್ಲು ತೂರಾಟ ನಡೆಸಿರೋದಾಗಿ ತಿಳಿದು ಬಂದಿದೆ. ಇದಷ್ಟೇ ಅಲ್ಲದೇ ಉದ್ರಿಕ್ತ ಗುಂಪುಗಳಿಂದ ಬೈಕ್ ಗಳಿಗೆ ಬೆಂಕಿ ಕೂಡ ಹಚ್ಚಿದ್ದಾರೆ ಎನ್ನಲಾಗಿದೆ. ಜೊತೆಗೆ ಮೆರವಣಿಗೆ ಸಾಗುತ್ತಿದ್ದಂತ ರಸ್ತೆಗಳಲ್ಲಿ ನಿಲ್ಲಿಸಿದ್ದಂತ ಕಾರುಗಳ ಗ್ಲಾಸ್ ಗಳನ್ನು ಪುಡಿ ಪುಡಿ ಮಾಡಿದ್ದಾರೆ ಎನ್ನಲಾಗಿದೆ. ಈ ಮೂಲಕ ನಗರದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಕೂಡ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada