ಶಿವಮೊಗ್ಗ:ನಿನ್ನೆ ಕೇಸರಿ ಧ್ವಜ: ಇಂದು ತ್ರಿವರ್ಣ ಧ್ವಜ ಹಾರಿಸಿದ ಎನ್ ಎಸ್‍ಯುಐ

 

 

 

ಶಿವಮೊಗ್ಗ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕೇಸರಿ ಧ್ವಜ ಹಾರಿಸಿದ್ದ ಧ್ವಂಜಸ್ತಂಭದಲ್ಲಿ ಬುಧವಾರ ರಾಷ್ಟ್ರ ಧ್ವಜಾರೋಹಣ ಮಾಡಲಾಯಿತು.

ಹಿಜಾಬ್ – ಕೇಸರಿ ಸಂಘರ್ಷ ನಡುವೆ ಮಂಗಳವಾರ ಧ್ವಂಜಸ್ತಂಭಕ್ಕೆ ಕೇಸರಿ ಬಾವುಟ ಕಟ್ಟಲಾಗಿತ್ತು.

ಬುಧವಾರ ಎನ್‌ಎಸ್ ಯುಐ ಕಾರ್ಯಕರ್ತರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು

ಎನ್‌ಎಸ್ ಯುಐ ಕಾರ್ಯಕರ್ತರು ಹಿಜಾಬ್ – ಕೇಸರಿ ವಿಚಾರ ಬಿಟ್ಟು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬೇಕು. ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಮನವಿ ಮಾಡಿದರು.

ಮಂಗಳವಾರ ಸ್ಕಾರ್ಫ್‌ ವಿರುದ್ಧ ಶಿವಮೊಗ್ಗ ನಗರದ ಬಾಪೂಜಿ ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೇಸರಿ ಶಾಲು ಹಾಕಿ ಬಂದಿದ್ದ ಕೆಲವು ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿನ ಧ್ವಂಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸುವ ಮೂಲಕ ಸ್ಕಾರ್ಫ್‌-ಕೇಸರಿ ವಿವಾದಕ್ಕೆ ಮತ್ತೊಂದು ತಿರುವು ನೀಡಲು ಯತ್ನಿಸಿದ್ದರು. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಮಧ್ಯ ಪ್ರವೇಶಿಸಬೇಕಾಯಿತು. ಅಲ್ಲದೆ ತಳ್ಳಾಟ-ನೂಕಾಟ, ಪರಸ್ಪರ ಅನ್ಯಕೋಮಿನ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಅನಿವಾರ್ಯವಾಗಿ ಲಘು ಲಾಠಿ ಪ್ರಹಾರ ನಡೆಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸೌರ ಸ್ಫೋಟಗಳು ಭೂಮಿಗೆ ಅಪ್ಪಳಿಸುವ ನಿರೀಕ್ಷೆಯಿದೆ.

Wed Feb 9 , 2022
ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ : ಸೌರ ಸ್ಫೋಟಗಳು ಭೂಮಿಗೆ ಅಪ್ಪಳಿಸುವ ನಿರೀಕ್ಷೆಯಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಅಂಡ್ ರಿಸರ್ಚ್‌ನ ಬಾಹ್ಯಾಕಾಶ ವಿಜ್ಞಾನದ ಶ್ರೇಷ್ಠ ಕೇಂದ್ರ (ಸೆಸ್) ಸೌರ ಸ್ಫೋಟಗಳು ಮತ್ತು ಭೂಕಾಂತೀಯ ಬಿರುಗಾಳಿಗಳ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ.ಬುಧವಾರ ಮತ್ತು ಗುರುವಾರ, ಭೂಮಿಯು ಮತ್ತೊಂದು ಹೊಸ ಬೆದರಿಕೆಯನ್ನು ಎದುರಿಸಲಿದೆ. ಇಂದು, ಹೊಸ ಸೌರ ಸ್ಫೋಟಗಳು ಭೂಮಿಗೆ ಅಪ್ಪಳಿಸಲು ಸಜ್ಜಾಗಿವೆ. ಇದು ಬುಧವಾರ ಮತ್ತು ಗುರುವಾರ […]

Advertisement

Wordpress Social Share Plugin powered by Ultimatelysocial