ಶಿವಕುಮಾರ ಸ್ವಾಮೀಜಿ ಜಯಂತೋತ್ಸವಕ್ಕೆ ತುಮಕೂರಿಗೆ ರಾಹುಲ್‌ ಗಾಂಧಿ: ಹಿರಿಯ ನಾಯಕರೊಂದಿಗೆ ಸಭೆ

ತುಮಕೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ಮುಗ್ಗರಿಸಿರುವ ಕಾಂಗ್ರೆಸ್‌ ಇದೀಗ ಪಕ್ಷವನ್ನ ಸಂಘಟಿಸಲು ತೊಡೆ ತಟ್ಟಿ ನಿಂತಿದೆ. ಈ ನಿಟ್ಟಿನಲ್ಲಿ ಮಾರ್ಚ್‌ 31ರಂದು ರಾಹುಲ್‌ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಾರ್ಚ್‌31 ನಡೆದಾಡುವ ದೇವರು, ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತೋತ್ಸವ ಹಿನ್ನೆಲೆಯಲ್ಲಿ ತುಮಕೂರಿಗೆ ಭೇಟಿ ನೀಡಲಿದ್ದಾರೆ.

 

ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಸಿದ್ದಲಿಂಗೇಶ್ವರನಿಗೂ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಅಲ್ಲಿಯೇ ಪ್ರಸಾದ ಸ್ವೀಕರಿಸಿ ಆನಂತರ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಬರಲಿದ್ದಾರೆ. ಏಪ್ರಿಲ್ 1ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಿರಿಯ ನಾಯಕರ ಸಭೆ ನಡೆಯಲಿದೆ. ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ನಾಯಕರೂ ಕೂಡ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆ ಬಳಿಕ ಸದಸ್ಯತ್ವ ನೋಂದಣಿ ವಿಚಾರವಾಗಿ ಜೂಮ್ ಮೀಟಿಂಗ್ ನಡೆಯಲಿದ್ದು, ಸಮಯ ಇದ್ದರೆ ಹಿರಿಯ ನಾಯಕರ ಜತೆ ರಾಹುಲ್ ಗಾಂಧಿ ಪ್ರತ್ಯೇಕ ಸಭೆ ನಡೆಸಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪದವಿ, ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಹೊಸ ರೂಪ : ಬಿಎಡ್ ಇನ್ನೂ 5 ವರ್ಷ!

Tue Mar 29 , 2022
ಬೆಂಗಳೂರು : ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಸರ್ಜರಿ ಮಾಡಿ ಹೊಸ ಸ್ವರೂಪ ಪ್ರಕಟಿಸಿದ್ದು, ಎಂಸಿಎ ಕೋರ್ಸ್ ಎರಡು ವರ್ಷ ಎಂದು ಸ್ಪಷ್ಟಪಡಿಸಲಾಗಿದ್ದು, ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಅನ್ವಯ ಬಿಎಡ್ ನಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ 5 ವರ್ಷ ವಿಸ್ತರಿಸಲು ಮುಂದಾಗಿದೆ ಎನ್ನಲಾಗಿದೆ.ಪರಿಷತ್​ನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್​ನ ಎಸ್.ಎಲ್.ಭೋಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಪದವಿ […]

Advertisement

Wordpress Social Share Plugin powered by Ultimatelysocial