ದೇಶದಲ್ಲಿ ಪ್ರತಿವರ್ಷ ಸಾವಿರಾರು ಸಂಖ್ಯೆಯಲ್ಲಿ ರೈಲು ದುರಂತದಲ್ಲಿ ಜನ – ಜಾನುವಾರುಗಳ ಸಾವು ಸಂಭವಿಸುತ್ತದೆ.
ಇಂತಹದೊಂದು ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಾಳಗುಪ್ಪದಿಂದ ಶಿವಮೊಗ್ಗಕ್ಕೆ ಪ್ಯಾಸೆಂಜರ್ ರೈಲು ಬರುತ್ತಿದ್ದ ವೇಳೆ ಕಾಶಿಪುರ ಗೇಟ್ ಡಳಿ ಹಳಿಗಳ ಮೇಲೆ ಎಮ್ಮೆಗಳ ಹಿಂಡು ನಿಂತಿರುವುದನ್ನು ಲೋಕೋ ಪೈಲೆಟ್ ಗಮನಿಸಿದ್ದಾರೆ.
ಕೂಡಲೇ ಅವರು ರೈಲು ನಿಲ್ಲಿಸಿದ್ದು ಎಮ್ಮೆಗಳು ಹಳಿಗಳ ಮೇಲಿನಿಂದ ಇಳಿದು ಹೋದ ನಂತರ ರೈಲು ಚಾಲನೆ ಮಾಡಿಕೊಂಡು ಹೋಗಿದ್ದಾರೆ. ಇದನ್ನು ಗಮನಿಸಿದ ವಾಹನ ಸವಾರರು, ಲೋಕೋ ಪೈಲೆಟ್ ಮಾನವೀಯ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada